ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದ ಆಶ್ರಯದಲ್ಲಿ ಯಕ್ಷ ಸಂಭ್ರಮ ಮತ್ತು ವನಜ ರಂಗಮನೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.
ಕಲಾಪೋಷಕ ಹಾಗು ಮೂಡಬಿದಿರೆಯ ಧನಲಕ್ಷ್ಮಿ ಕ್ಯಾಶ್ಯೂ ಎಕ್ಸ್ ಪೋರ್ಟ್ ಇದರ ಅಧ್ಯಕ್ಷ ಕೆ.ಶ್ರೀಪತಿ ಭಟ್ ಉದ್ಘಾಟಿಸಿದರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ರಂಗಮನೆಯ ವತಿಯಿಂದ ನೀಡುವ ವನಜ ರಂಗಮನೆ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ ಅವರಿಗೆ ನೀಡಿ ಗೌರವಿಸಲಾಯಿತು. ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ಉಪಸ್ಥಿತರಿದ್ದರು.
ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದ ಅಧ್ಯಕ್ಷ ಜೀವನ್ ರಾಂ ಸುಳ್ಯ ಸ್ವಾಗತಿಸಿ, ನಿರ್ದೇಶಕ ಕೆ.ಕೃಷ್ಣಮೂರ್ತಿ ವಂದಿಸಿದರು. ಡಾ.ಸುಂದರ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಾ ನಿಷಾದ ಯಕ್ಷಗಾನ ನಡೆಯಿತು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…