Advertisement
ಸುದ್ದಿಗಳು

ಲೇಖನಗಳ ಸತ್ಯಾಂಶವನ್ನು ವಿಮರ್ಶಿಸಿ – ನಾ. ಕಾರಂತ ಪೆರಾಜೆ

Share

ಪುತ್ತೂರು: ಉತ್ತಮ ಓದುಗಾರ ಒಳ್ಳೆಯ ಬರಹಗಾರನಾಗಬಹುದು ಎಂಬ ಮಾತಿನಂತೆ ಪತ್ರಕರ್ತ ಸಮಾಜದಲ್ಲಿ ಆಗುವ ವಿಚಾರಗಳನ್ನು ಲೇಖನದ ರೂಪದಲ್ಲಿ ಜನರಿಗೆ ತಲುಪಿಸಬೇಕು. ಆದರೆ ಆ ಲೇಖನದಲ್ಲಿ ತಪ್ಪು ಮಾಹಿತಿ ಇರದಂತೆ ಎಚ್ಚರವಹಿಸಬೇಕು. ಆದ್ದರಿಂದ ಸತ್ಯಾಂಶಗಳನ್ನು ವಿಮರ್ಶಿಸಿ ಲೇಖನ ಬರೆಯಬೇಕು ಎಂದು ಪುತ್ತೂರಿನ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ಹೇಳಿದರು.
ಅವರು ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ‘ಬರವಣಿಗೆ ಏನು ಮತ್ತು ಹೇಗೆ‘ ಎಂಬ ವಿಷಯದ ಕುರಿತು  ಮಾತನಾಡಿದರು.
ಪ್ರತಿಯೊಂದು ಲೇಖನವು ಯಾಕಾಗಿ, ಯಾರಿಗಾಗಿ, ಏನನ್ನು ಮತ್ತು ಯಾವಾಗ ಎಂಬ ನಾಲ್ಕು ಅಡಿಗಟ್ಟಿನ ಮೇಲೆ ನಿಂತಿದೆ. ಹಾಗಾಗಿ ಈ ಪ್ರಶ್ನೆಗಳಿಗೆ ಉತ್ತರವನ್ನು ಹುಡಿಕಿ ಅದನ್ನು ಬರವಣಿಗೆ ಮೂಲಕ ರೂಪ ನೀಡುವುದೇ ಲೇಖನ ಎಂದು ತಿಳಿಸಿದರು.
ಸಮಯಪಾಲನೆಯೊಂದಿಗೆ ಸದಾ ವಿಷಯಗಳನ್ನು ಹುಡುಕುವ ಕಾರ್ಯದಲ್ಲಿ ನಿರತರಾಗಿರುವವರು ಪತ್ರಕರ್ತರು. ಹಾಗಾಗಿ ಆಯಾಯ ಋತುವಿಗೆ ಆಧಾರಿತ ಲೇಖನವನ್ನು ಬರೆಯಲು ಸಾಧ್ಯವಾಗುತ್ತದೆ. ಇದರಿಂದ ಆತನ ಬರವಣಿಗೆ ವೃದ್ಧಿಸುತ್ತದೆ ಎಂದು ಸಲಹೆ ನೀಡಿದರು.
ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್‍ಕುಮಾರ್ ಕಮ್ಮಜೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಭವ್ಯಾ ಪಿ.ಆರ್. ನಿಡ್ಪಳ್ಳಿ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

15 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

16 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago