Advertisement
ಸುದ್ದಿಗಳು

ಲೇಖನಗಳ ಸತ್ಯಾಂಶವನ್ನು ವಿಮರ್ಶಿಸಿ – ನಾ. ಕಾರಂತ ಪೆರಾಜೆ

Share

ಪುತ್ತೂರು: ಉತ್ತಮ ಓದುಗಾರ ಒಳ್ಳೆಯ ಬರಹಗಾರನಾಗಬಹುದು ಎಂಬ ಮಾತಿನಂತೆ ಪತ್ರಕರ್ತ ಸಮಾಜದಲ್ಲಿ ಆಗುವ ವಿಚಾರಗಳನ್ನು ಲೇಖನದ ರೂಪದಲ್ಲಿ ಜನರಿಗೆ ತಲುಪಿಸಬೇಕು. ಆದರೆ ಆ ಲೇಖನದಲ್ಲಿ ತಪ್ಪು ಮಾಹಿತಿ ಇರದಂತೆ ಎಚ್ಚರವಹಿಸಬೇಕು. ಆದ್ದರಿಂದ ಸತ್ಯಾಂಶಗಳನ್ನು ವಿಮರ್ಶಿಸಿ ಲೇಖನ ಬರೆಯಬೇಕು ಎಂದು ಪುತ್ತೂರಿನ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ಹೇಳಿದರು.
ಅವರು ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ‘ಬರವಣಿಗೆ ಏನು ಮತ್ತು ಹೇಗೆ‘ ಎಂಬ ವಿಷಯದ ಕುರಿತು  ಮಾತನಾಡಿದರು.
ಪ್ರತಿಯೊಂದು ಲೇಖನವು ಯಾಕಾಗಿ, ಯಾರಿಗಾಗಿ, ಏನನ್ನು ಮತ್ತು ಯಾವಾಗ ಎಂಬ ನಾಲ್ಕು ಅಡಿಗಟ್ಟಿನ ಮೇಲೆ ನಿಂತಿದೆ. ಹಾಗಾಗಿ ಈ ಪ್ರಶ್ನೆಗಳಿಗೆ ಉತ್ತರವನ್ನು ಹುಡಿಕಿ ಅದನ್ನು ಬರವಣಿಗೆ ಮೂಲಕ ರೂಪ ನೀಡುವುದೇ ಲೇಖನ ಎಂದು ತಿಳಿಸಿದರು.
ಸಮಯಪಾಲನೆಯೊಂದಿಗೆ ಸದಾ ವಿಷಯಗಳನ್ನು ಹುಡುಕುವ ಕಾರ್ಯದಲ್ಲಿ ನಿರತರಾಗಿರುವವರು ಪತ್ರಕರ್ತರು. ಹಾಗಾಗಿ ಆಯಾಯ ಋತುವಿಗೆ ಆಧಾರಿತ ಲೇಖನವನ್ನು ಬರೆಯಲು ಸಾಧ್ಯವಾಗುತ್ತದೆ. ಇದರಿಂದ ಆತನ ಬರವಣಿಗೆ ವೃದ್ಧಿಸುತ್ತದೆ ಎಂದು ಸಲಹೆ ನೀಡಿದರು.
ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್‍ಕುಮಾರ್ ಕಮ್ಮಜೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಭವ್ಯಾ ಪಿ.ಆರ್. ನಿಡ್ಪಳ್ಳಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

2 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

3 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

1 day ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

3 days ago