Advertisement
ಸುದ್ದಿಗಳು

ಲೇಖನಗಳ ಸತ್ಯಾಂಶವನ್ನು ವಿಮರ್ಶಿಸಿ – ನಾ. ಕಾರಂತ ಪೆರಾಜೆ

Share

ಪುತ್ತೂರು: ಉತ್ತಮ ಓದುಗಾರ ಒಳ್ಳೆಯ ಬರಹಗಾರನಾಗಬಹುದು ಎಂಬ ಮಾತಿನಂತೆ ಪತ್ರಕರ್ತ ಸಮಾಜದಲ್ಲಿ ಆಗುವ ವಿಚಾರಗಳನ್ನು ಲೇಖನದ ರೂಪದಲ್ಲಿ ಜನರಿಗೆ ತಲುಪಿಸಬೇಕು. ಆದರೆ ಆ ಲೇಖನದಲ್ಲಿ ತಪ್ಪು ಮಾಹಿತಿ ಇರದಂತೆ ಎಚ್ಚರವಹಿಸಬೇಕು. ಆದ್ದರಿಂದ ಸತ್ಯಾಂಶಗಳನ್ನು ವಿಮರ್ಶಿಸಿ ಲೇಖನ ಬರೆಯಬೇಕು ಎಂದು ಪುತ್ತೂರಿನ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ಹೇಳಿದರು.
ಅವರು ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ‘ಬರವಣಿಗೆ ಏನು ಮತ್ತು ಹೇಗೆ‘ ಎಂಬ ವಿಷಯದ ಕುರಿತು  ಮಾತನಾಡಿದರು.
ಪ್ರತಿಯೊಂದು ಲೇಖನವು ಯಾಕಾಗಿ, ಯಾರಿಗಾಗಿ, ಏನನ್ನು ಮತ್ತು ಯಾವಾಗ ಎಂಬ ನಾಲ್ಕು ಅಡಿಗಟ್ಟಿನ ಮೇಲೆ ನಿಂತಿದೆ. ಹಾಗಾಗಿ ಈ ಪ್ರಶ್ನೆಗಳಿಗೆ ಉತ್ತರವನ್ನು ಹುಡಿಕಿ ಅದನ್ನು ಬರವಣಿಗೆ ಮೂಲಕ ರೂಪ ನೀಡುವುದೇ ಲೇಖನ ಎಂದು ತಿಳಿಸಿದರು.
ಸಮಯಪಾಲನೆಯೊಂದಿಗೆ ಸದಾ ವಿಷಯಗಳನ್ನು ಹುಡುಕುವ ಕಾರ್ಯದಲ್ಲಿ ನಿರತರಾಗಿರುವವರು ಪತ್ರಕರ್ತರು. ಹಾಗಾಗಿ ಆಯಾಯ ಋತುವಿಗೆ ಆಧಾರಿತ ಲೇಖನವನ್ನು ಬರೆಯಲು ಸಾಧ್ಯವಾಗುತ್ತದೆ. ಇದರಿಂದ ಆತನ ಬರವಣಿಗೆ ವೃದ್ಧಿಸುತ್ತದೆ ಎಂದು ಸಲಹೆ ನೀಡಿದರು.
ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್‍ಕುಮಾರ್ ಕಮ್ಮಜೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಭವ್ಯಾ ಪಿ.ಆರ್. ನಿಡ್ಪಳ್ಳಿ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

4 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

12 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

12 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

19 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

20 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago