ಲೋಕಸಭಾ ಚುನಾವಣಾ ಫಲಿತಾಂಶ: ಎಲ್ಲೆಡೆ ಕಾತರ……ಕುತೂಹಲ….!

May 22, 2019
9:49 PM

ಸುಳ್ಯ: ಮತ ಚಲಾಯಿಸಿ 35 ದಿನಗಳ ಬಳಿಕ ಬರುವ ಲೋಕಸಭಾ ಚುನಾವಣೆ ಫಲಿತಾಂಶದ ಕಾತರ ಇಡೀ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎಲ್ಲೆಡೆ ಮನೆ ಮಾಡಿದೆ. ಏಳು ಹಂತದ ಚುನಾವಣೆ ಮೆ.19ಕ್ಕೆ ಮುಗಿಯುತ್ತಿದ್ದಂತೆ ಚುನಾವಣಾ ಫಲಿತಾಂಶ ಕುರಿತಾದ ಕಾತರ, ಚರ್ಚೆ ಮತದಾರರಲ್ಲಿ, ರಾಜಕೀಯ ಪಕ್ಷಗಳಲ್ಲಿ ಎಲ್ಲೆಡೆ ಪ್ರಾರಂಭಗೊಂಡಿತು. ಫಲಿತಾಂಶದ ಮುನ್ನಾ ದಿನವಾದ ಬುಧವಾರವಂತೂ ಫಲಿತಾಂಶ ಕುರಿತಾದ ಕಾತರವೇ ಮುಗಿಲು ಮುಟ್ಟಿತ್ತು. ಎಲ್ಲೆಡೆ ಫಲಿತಾಂಶದ, ಸೋಲು ಗೆಲುವಿನ, ಬಹುಮತದ ಕುರಿತ ಚರ್ಚೆಗಳೇ ಕೇಳಿ ಬರುತ್ತಿತ್ತು.

Advertisement
Advertisement

ಸುಮಾರು ಒಂದೂವರೆ ತಿಂಗಳ ಕಾಲ ನಡೆದ ಬಿರುಸಿನ ಪ್ರಚಾರದ ಬಳಿಕ ಏಪ್ರಿಲ್ 18 ರಂದು ದ.ಕ.ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆದಿತ್ತು. 17,24,460 ಮತದಾರರ ಪೈಕಿ 13,43,378 ಮಂದಿ ಮತ ಚಲಾಯಿಸಿ 77.90 ಶೇ. ಮತದಾನ ದಾಖಲಾಗಿತ್ತು. ಬಿಜೆಪಿ, ಕಾಂಗ್ರೆಸ್, ಎಸ್.ಡಿ.ಪಿ.ಐ, ಬಿಎಸ್ ಪಿ, ಉತ್ತಮ ಪ್ರಜಾಕೀಯ ಪಾರ್ಟಿ, ಹಿಂದೂಸ್ತಾನ್ ಜನತಾ ಪಾರ್ಟಿ ಅಭ್ಯರ್ಥಿ ಗಳು ಮತ್ತು ಏಳು ಮಂದಿ ಪಕ್ಷೇತರರು ಸೇರಿ ಒಟ್ಟು 13 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮಧ್ಯೆ ಬಿರುಸಿನ ಸ್ಪರ್ಧೆ ಏರ್ಪಟ್ಟಿತು. ಫಲಿತಾಂಶದ ಬಗ್ಗೆ ಸಾಕಷ್ಟು ಕುತೂಹಲ ಇದ್ದರೂ ಎರಡೂ ಪಕ್ಷಗಳು ಗೆಲುವಿನ ನಿರೀಕ್ಷೆಯಲ್ಲಿದೆ.

ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಮತದಾನ ದಾಖಲಾದ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆ ಕುರಿತಾದ ಕುತೂಹಲ ಗರಿಗೆದರಿದೆ. ಇಡೀ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಪಡೆಯುವ ಬಹುಮತ ಫಲಿತಾಂಶ ದಲ್ಲಿ ನಿರ್ಣಾಯಕವಾಗಲಿದೆ ಎಂದು ವಿಶ್ಲೇಷಿಸಲಾಗುತ್ತದೆ. ಆದುದರಿಂದಲೇ ಸುಳ್ಯ ಕ್ಷೇತ್ರದಲ್ಲಿ ಫಲಿತಾಂಶ ಕುರಿತಾದ ಕಾತರ ಸ್ವಲ್ಪ ಹೆಚ್ಚೇ ಇದೆ ಎಂದು ಹೇಳಬಹುದು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ
June 10, 2025
7:23 AM
by: The Rural Mirror ಸುದ್ದಿಜಾಲ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧ
May 2, 2025
8:59 PM
by: ದ ರೂರಲ್ ಮಿರರ್.ಕಾಂ
ರೈತರಿಗೆ 400 ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷಿ ಮತ್ತು ಯಂತ್ರೋಪಕರಣ ವಿತರಣೆ
April 22, 2025
6:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group