ಮತ ಎಣಿಕೆಯ ಕೇಂದ್ರದತ್ತ ತೆರಳಿದ ಸುಳ್ಯ ಬಿಜೆಪಿ ತಂಡ
ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ಸುರತ್ಕಲ್ ಎನ್ಐಟಿಕೆ ಮತಎಣಿಕೆ ಕೇಂದ್ರದಲ್ಲಿ ಮೆ.23ರಂದು ನಡೆಯಲಿದೆ. ಮತ ಎಣಿಕೆ ಕಾರ್ಯದಲ್ಲಿ ಭಾಗವಹಿಸುವ ವಿವಿಧ ಪಕ್ಷಗಳ ಮತ ಎಣಿಕೆ ಏಜೆಂಟ್ ಗಳ ತಂಡ ಬುಧವಾರ ಮಂಗಳೂರಿಗೆ ತೆರಳಿದ್ದಾರೆ.
ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಒಬ್ಬ ಸಹಾಯಕ ಚುನಾವಣಾಧಿಕಾರಿಯ ಏಜೆಂಟ್ ಮತ್ತು ಪ್ರತಿ ಟೇಬಲ್ ಗೆ ಒಬ್ಬರಂತೆ 14 ಮಂದಿ ಮತ ಎಣಿಕೆ ಏಜೆಂಟ್ ಗಳು ಸೇರಿ 15 ಮಂದಿಯ ತಂಡ ತೆರಳಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ ತಲಾ 14 ಟೇಬಲ್ ಗಳಲ್ಲಿ ನಡೆಯುತ್ತದೆ. 8 ವಿಧಾನ ಸಭಾ ಕ್ಷೇತ್ತದಲ್ಲಿ ತಲಾ 14 ರಂತೆ ಒಟ್ಟು 112 ಟೇಬಲ್ ಗಳಿರುತ್ತದೆ. 15 ರಿಂದ 18 ಸುತ್ತುಗಳಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಸುಳ್ಯ ಕ್ಷೇತ್ರದ ಮತ ಎಣಿಕೆ 17 ಸುತ್ತುಗಳಲ್ಲಿ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದ 5 ಬೂತ್ ಗಳ ವಿವಿ ಪ್ಯಾಟ್ ಎಣಿಕೆ ಕೂಡ ನಡೆಯಲಿದೆ. ಮಧ್ಯಾಹ್ನದ ಬಳಿಕ ಪೂರ್ಣ ಫಲಿತಾಂಶ ಹೊರಬರುವ ನಿರೀಕ್ಷೆ ಇದೆ.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…