ಮತ ಎಣಿಕೆಯ ಕೇಂದ್ರದತ್ತ ತೆರಳಿದ ಸುಳ್ಯ ಬಿಜೆಪಿ ತಂಡ
ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ಸುರತ್ಕಲ್ ಎನ್ಐಟಿಕೆ ಮತಎಣಿಕೆ ಕೇಂದ್ರದಲ್ಲಿ ಮೆ.23ರಂದು ನಡೆಯಲಿದೆ. ಮತ ಎಣಿಕೆ ಕಾರ್ಯದಲ್ಲಿ ಭಾಗವಹಿಸುವ ವಿವಿಧ ಪಕ್ಷಗಳ ಮತ ಎಣಿಕೆ ಏಜೆಂಟ್ ಗಳ ತಂಡ ಬುಧವಾರ ಮಂಗಳೂರಿಗೆ ತೆರಳಿದ್ದಾರೆ.
ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಒಬ್ಬ ಸಹಾಯಕ ಚುನಾವಣಾಧಿಕಾರಿಯ ಏಜೆಂಟ್ ಮತ್ತು ಪ್ರತಿ ಟೇಬಲ್ ಗೆ ಒಬ್ಬರಂತೆ 14 ಮಂದಿ ಮತ ಎಣಿಕೆ ಏಜೆಂಟ್ ಗಳು ಸೇರಿ 15 ಮಂದಿಯ ತಂಡ ತೆರಳಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ ತಲಾ 14 ಟೇಬಲ್ ಗಳಲ್ಲಿ ನಡೆಯುತ್ತದೆ. 8 ವಿಧಾನ ಸಭಾ ಕ್ಷೇತ್ತದಲ್ಲಿ ತಲಾ 14 ರಂತೆ ಒಟ್ಟು 112 ಟೇಬಲ್ ಗಳಿರುತ್ತದೆ. 15 ರಿಂದ 18 ಸುತ್ತುಗಳಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಸುಳ್ಯ ಕ್ಷೇತ್ರದ ಮತ ಎಣಿಕೆ 17 ಸುತ್ತುಗಳಲ್ಲಿ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದ 5 ಬೂತ್ ಗಳ ವಿವಿ ಪ್ಯಾಟ್ ಎಣಿಕೆ ಕೂಡ ನಡೆಯಲಿದೆ. ಮಧ್ಯಾಹ್ನದ ಬಳಿಕ ಪೂರ್ಣ ಫಲಿತಾಂಶ ಹೊರಬರುವ ನಿರೀಕ್ಷೆ ಇದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…