ಮತ ಎಣಿಕೆಯ ಕೇಂದ್ರದತ್ತ ತೆರಳಿದ ಸುಳ್ಯ ಬಿಜೆಪಿ ತಂಡ
ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ಸುರತ್ಕಲ್ ಎನ್ಐಟಿಕೆ ಮತಎಣಿಕೆ ಕೇಂದ್ರದಲ್ಲಿ ಮೆ.23ರಂದು ನಡೆಯಲಿದೆ. ಮತ ಎಣಿಕೆ ಕಾರ್ಯದಲ್ಲಿ ಭಾಗವಹಿಸುವ ವಿವಿಧ ಪಕ್ಷಗಳ ಮತ ಎಣಿಕೆ ಏಜೆಂಟ್ ಗಳ ತಂಡ ಬುಧವಾರ ಮಂಗಳೂರಿಗೆ ತೆರಳಿದ್ದಾರೆ.
ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಒಬ್ಬ ಸಹಾಯಕ ಚುನಾವಣಾಧಿಕಾರಿಯ ಏಜೆಂಟ್ ಮತ್ತು ಪ್ರತಿ ಟೇಬಲ್ ಗೆ ಒಬ್ಬರಂತೆ 14 ಮಂದಿ ಮತ ಎಣಿಕೆ ಏಜೆಂಟ್ ಗಳು ಸೇರಿ 15 ಮಂದಿಯ ತಂಡ ತೆರಳಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ ತಲಾ 14 ಟೇಬಲ್ ಗಳಲ್ಲಿ ನಡೆಯುತ್ತದೆ. 8 ವಿಧಾನ ಸಭಾ ಕ್ಷೇತ್ತದಲ್ಲಿ ತಲಾ 14 ರಂತೆ ಒಟ್ಟು 112 ಟೇಬಲ್ ಗಳಿರುತ್ತದೆ. 15 ರಿಂದ 18 ಸುತ್ತುಗಳಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಸುಳ್ಯ ಕ್ಷೇತ್ರದ ಮತ ಎಣಿಕೆ 17 ಸುತ್ತುಗಳಲ್ಲಿ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದ 5 ಬೂತ್ ಗಳ ವಿವಿ ಪ್ಯಾಟ್ ಎಣಿಕೆ ಕೂಡ ನಡೆಯಲಿದೆ. ಮಧ್ಯಾಹ್ನದ ಬಳಿಕ ಪೂರ್ಣ ಫಲಿತಾಂಶ ಹೊರಬರುವ ನಿರೀಕ್ಷೆ ಇದೆ.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…