ಮತ ಎಣಿಕೆಯ ಕೇಂದ್ರದತ್ತ ತೆರಳಿದ ಸುಳ್ಯ ಬಿಜೆಪಿ ತಂಡ
ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ಸುರತ್ಕಲ್ ಎನ್ಐಟಿಕೆ ಮತಎಣಿಕೆ ಕೇಂದ್ರದಲ್ಲಿ ಮೆ.23ರಂದು ನಡೆಯಲಿದೆ. ಮತ ಎಣಿಕೆ ಕಾರ್ಯದಲ್ಲಿ ಭಾಗವಹಿಸುವ ವಿವಿಧ ಪಕ್ಷಗಳ ಮತ ಎಣಿಕೆ ಏಜೆಂಟ್ ಗಳ ತಂಡ ಬುಧವಾರ ಮಂಗಳೂರಿಗೆ ತೆರಳಿದ್ದಾರೆ.
ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಒಬ್ಬ ಸಹಾಯಕ ಚುನಾವಣಾಧಿಕಾರಿಯ ಏಜೆಂಟ್ ಮತ್ತು ಪ್ರತಿ ಟೇಬಲ್ ಗೆ ಒಬ್ಬರಂತೆ 14 ಮಂದಿ ಮತ ಎಣಿಕೆ ಏಜೆಂಟ್ ಗಳು ಸೇರಿ 15 ಮಂದಿಯ ತಂಡ ತೆರಳಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ ತಲಾ 14 ಟೇಬಲ್ ಗಳಲ್ಲಿ ನಡೆಯುತ್ತದೆ. 8 ವಿಧಾನ ಸಭಾ ಕ್ಷೇತ್ತದಲ್ಲಿ ತಲಾ 14 ರಂತೆ ಒಟ್ಟು 112 ಟೇಬಲ್ ಗಳಿರುತ್ತದೆ. 15 ರಿಂದ 18 ಸುತ್ತುಗಳಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಸುಳ್ಯ ಕ್ಷೇತ್ರದ ಮತ ಎಣಿಕೆ 17 ಸುತ್ತುಗಳಲ್ಲಿ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದ 5 ಬೂತ್ ಗಳ ವಿವಿ ಪ್ಯಾಟ್ ಎಣಿಕೆ ಕೂಡ ನಡೆಯಲಿದೆ. ಮಧ್ಯಾಹ್ನದ ಬಳಿಕ ಪೂರ್ಣ ಫಲಿತಾಂಶ ಹೊರಬರುವ ನಿರೀಕ್ಷೆ ಇದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…