ಮತ ಎಣಿಕೆಯ ಕೇಂದ್ರದತ್ತ ತೆರಳಿದ ಸುಳ್ಯ ಬಿಜೆಪಿ ತಂಡ
ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ಸುರತ್ಕಲ್ ಎನ್ಐಟಿಕೆ ಮತಎಣಿಕೆ ಕೇಂದ್ರದಲ್ಲಿ ಮೆ.23ರಂದು ನಡೆಯಲಿದೆ. ಮತ ಎಣಿಕೆ ಕಾರ್ಯದಲ್ಲಿ ಭಾಗವಹಿಸುವ ವಿವಿಧ ಪಕ್ಷಗಳ ಮತ ಎಣಿಕೆ ಏಜೆಂಟ್ ಗಳ ತಂಡ ಬುಧವಾರ ಮಂಗಳೂರಿಗೆ ತೆರಳಿದ್ದಾರೆ.
ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಒಬ್ಬ ಸಹಾಯಕ ಚುನಾವಣಾಧಿಕಾರಿಯ ಏಜೆಂಟ್ ಮತ್ತು ಪ್ರತಿ ಟೇಬಲ್ ಗೆ ಒಬ್ಬರಂತೆ 14 ಮಂದಿ ಮತ ಎಣಿಕೆ ಏಜೆಂಟ್ ಗಳು ಸೇರಿ 15 ಮಂದಿಯ ತಂಡ ತೆರಳಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ ತಲಾ 14 ಟೇಬಲ್ ಗಳಲ್ಲಿ ನಡೆಯುತ್ತದೆ. 8 ವಿಧಾನ ಸಭಾ ಕ್ಷೇತ್ತದಲ್ಲಿ ತಲಾ 14 ರಂತೆ ಒಟ್ಟು 112 ಟೇಬಲ್ ಗಳಿರುತ್ತದೆ. 15 ರಿಂದ 18 ಸುತ್ತುಗಳಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಸುಳ್ಯ ಕ್ಷೇತ್ರದ ಮತ ಎಣಿಕೆ 17 ಸುತ್ತುಗಳಲ್ಲಿ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದ 5 ಬೂತ್ ಗಳ ವಿವಿ ಪ್ಯಾಟ್ ಎಣಿಕೆ ಕೂಡ ನಡೆಯಲಿದೆ. ಮಧ್ಯಾಹ್ನದ ಬಳಿಕ ಪೂರ್ಣ ಫಲಿತಾಂಶ ಹೊರಬರುವ ನಿರೀಕ್ಷೆ ಇದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…