ಮತ ಎಣಿಕೆಯ ಕೇಂದ್ರದತ್ತ ತೆರಳಿದ ಸುಳ್ಯ ಬಿಜೆಪಿ ತಂಡ
ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ಸುರತ್ಕಲ್ ಎನ್ಐಟಿಕೆ ಮತಎಣಿಕೆ ಕೇಂದ್ರದಲ್ಲಿ ಮೆ.23ರಂದು ನಡೆಯಲಿದೆ. ಮತ ಎಣಿಕೆ ಕಾರ್ಯದಲ್ಲಿ ಭಾಗವಹಿಸುವ ವಿವಿಧ ಪಕ್ಷಗಳ ಮತ ಎಣಿಕೆ ಏಜೆಂಟ್ ಗಳ ತಂಡ ಬುಧವಾರ ಮಂಗಳೂರಿಗೆ ತೆರಳಿದ್ದಾರೆ.
ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಒಬ್ಬ ಸಹಾಯಕ ಚುನಾವಣಾಧಿಕಾರಿಯ ಏಜೆಂಟ್ ಮತ್ತು ಪ್ರತಿ ಟೇಬಲ್ ಗೆ ಒಬ್ಬರಂತೆ 14 ಮಂದಿ ಮತ ಎಣಿಕೆ ಏಜೆಂಟ್ ಗಳು ಸೇರಿ 15 ಮಂದಿಯ ತಂಡ ತೆರಳಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ ತಲಾ 14 ಟೇಬಲ್ ಗಳಲ್ಲಿ ನಡೆಯುತ್ತದೆ. 8 ವಿಧಾನ ಸಭಾ ಕ್ಷೇತ್ತದಲ್ಲಿ ತಲಾ 14 ರಂತೆ ಒಟ್ಟು 112 ಟೇಬಲ್ ಗಳಿರುತ್ತದೆ. 15 ರಿಂದ 18 ಸುತ್ತುಗಳಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಸುಳ್ಯ ಕ್ಷೇತ್ರದ ಮತ ಎಣಿಕೆ 17 ಸುತ್ತುಗಳಲ್ಲಿ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದ 5 ಬೂತ್ ಗಳ ವಿವಿ ಪ್ಯಾಟ್ ಎಣಿಕೆ ಕೂಡ ನಡೆಯಲಿದೆ. ಮಧ್ಯಾಹ್ನದ ಬಳಿಕ ಪೂರ್ಣ ಫಲಿತಾಂಶ ಹೊರಬರುವ ನಿರೀಕ್ಷೆ ಇದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…