Advertisement
ಸುದ್ದಿಗಳು

ಲೋಕಸಭೆಯಲ್ಲಿ ಕಾಞಂಗಾಡ್-ಕಾಣಿಯೂರು ರೈಲ್ವೇ ಯೋಜನೆಯ ಸದ್ದು

Share

ಸುಳ್ಯ: ಹಲವು ವರ್ಷಗಳಿಂದ ಸದ್ದು ಮಾಡುತ್ತಿರುವ ಕಾಞಂಗಾಡ್-ಕಾಣಿಯೂರು ರೈಲ್ವೇ ಯೋಜನೆ ಇಂದು ಲೋಕಸಭೆಯಲ್ಲೂ ಸದ್ದು ಮಾಡಿತು. ಈ ಯೋಜನೆಯ ಬಗ್ಗೆ ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್ ರೈಲ್ವೇ ಸಚಿವಾಲಯದಲ್ಲಿ ಪ್ರಶ್ನೆ ಕೇಳಿದ್ದಾರೆ.

ಕಾಞಂಗಾಡ್-ಕಾಣಿಯೂರು ರೈಲ್ವೇ ಯೋಜನೆಯ ಸಮಗ್ರ ವಿವಿರ ನೀಡುವಂತೆ ಹಾಗೂ ಯೋಜನೆ ಯಾವ ಹಂತದಲ್ಲಿದೆ ಸೇರಿದಂತೆ ವಿವರನ್ನು ಲಿಖಿತ ಪ್ರಶ್ನೆ ಮೂಲಕ ರಾಜಮೋಹನ್ ಉಣ್ಣಿತ್ತಾನ್ ಕೇಳಿದ್ದಾರೆ. ಪ್ರಶ್ನೆಯಲ್ಲಿ ಈ  ರೈಲ್ವೇ ಯೋಜನೆ ಯಾವ ಹಂತದಲ್ಲಿದೆ , ಬಜೆಟ್ ನಲ್ಲಿ ಸರ್ವೆಗೆ ಅನುದಾನ ಲಭ್ಯವಾಗಿದೆಯೇ, ತೆಗೆದುಕೊಂಡಿರು ಕ್ರಮಗಳ ಬಗ್ಗೆ ಕೇಳಿದ್ದರು.

ಇದಕ್ಕೆ ಉತ್ತರ ನೀಡಿರುವ ರೈಲ್ವೇ ಸಚಿವ ಪಿಯೂಶ್ ಗೋಯಲ್, ಕಾಂಞಗಾಡ್-ಪಾಣತ್ತುರು-ಕಾಣಿಯೂರು ರೈಲ್ವೇ ಯೋಜನೆಗೆ 90.5 ಕಿಮೀ ಉದ್ದದ ಹಳಿ ಸರ್ವೆ ಕಾರ್ಯಕ್ಕೆ 2014-15 ರ ಬಜೆಟ್ ನಲ್ಲಿ ಹಣ ನೀಡಲಾಗಿದೆ.  ಇದರಲ್ಲಿ ಕೇರಳದ ಪ್ರದೇಶದ 40.5 ಕಿಮೀ ಸರ್ವೆ ಕಾರ್ಯ ಮುಗಿದಿದೆ. ಉಳಿದ ಕರ್ನಾಟಕದ ಭಾಗ 50 ಕಿಮೀ ಬಾಕಿ ಇದೆ. ಮುಂದೆ ಎಲ್ಲಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು  ಎಂದು ಲಿಖಿತವಾಗಿ ಹೇಳಿದ್ದಾರೆ.

 

 

ಏನಿದು  ಯೋಜನೆ ?

ಕಾಞಂಗಾಡು-ಕಾಣಿಯೂರು ರೈಲ್ಚೇ ಯೋಜನೆಯ ಪ್ರಾಥಮಿಕ ಸರ್ವೆ 2015 ರಲ್ಲಿ ಪೂರ್ತಿಗೊಂಡಿದ್ದು ಕೇಂದ್ರ ಮತ್ತು ರಾಜ್ಯ ಸರಕಾರಗಳ ಪಾಲುದಾರಿಕೆಯಲ್ಲಿ ಯೋಜನೆ ಅನುಷ್ಠಾನ ಮಾಡಬಹುದು ಎಂಬ ನಿಲುವನ್ನು ಕೇಂದ್ರ ಸರಕಾರ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ಭೂಸ್ವಾಧೀನ ಮತ್ತು ಇತರ ನಿರ್ಮಾಣ ಕಾಮಗಾರಿಗಳಿಗಾಗಿ ಬೇಕಾಗುವ ತನ್ನ ಪಾಲನ್ನು ನೀಡಲು ಸಿದ್ದ ಎಂದು ಕೇರಳ ಸರಕಾರ ಕಳೆದ ವರ್ಷ ಘೋಷಿಸಿ ರೈಲ್ವೇ ಸಚಿವಾಲಯಕ್ಕೆ ಪತ್ರ ನೀಡಿತ್ತು.

ಕಾಞಂಗಾಡ್‍ನಿಂದ ಪಾಣತ್ತೂರುವರೆಗೆ 40.5 ಕಿ.ಮಿ. ಮತ್ತು ಪಾಣತ್ತೂರಿನಿಂದ ಕಾಣಿಯೂರಿಗೆ 50 ಕಿ.ಮಿ. ಒಟ್ಟು 90.5 ಕಿ.ಮಿ. ಉದ್ದದ ಹಳಿ ನಿರ್ಮಿಸಿ ಮಲೆನಾಡ ತಪ್ಪಲ ಮೂಲಕ ರೈಲ್ವೇ ಸಂಪರ್ಕ ಸಾಧಿಸುವುದು ಯೋಜನೆಯ ಉದ್ದೇಶ. ಕಾಞಂಗಾಡ್‍ನಿಂದ  ಕೊಟ್ಟೋಡಿ, ಬಳಾಂತೋಡ್, ಪಾಣತ್ತೂರು, ಕಲ್ಲಪಳ್ಳಿ, ಆಲೆಟ್ಟಿ, ಸುಳ್ಯ ಮೂಲಕ ಕಾಣಿಯೂರಿನಲ್ಲಿ ಮಂಗಳೂರು-ಬೆಂಗಳೂರು ಹಳಿಯನ್ನು ಸಂಧಿಸಿ ರೈಲ್ವೇ ಸಂಪರ್ಕ ಸಾಧಿಸಲು ಯೋಜನೆ ರೂಪಿಸಲಾಗಿದೆ. ಕಾಞಂಗಾಡ್‍ನಿಂದ ಪಾಣತ್ತೂರುವರೆಗೆ ಹೆದ್ದಾರಿಗೆ ಸಮಾನಾಂತರವಾಗಿ ಬರುವ ಹಳಿಯು ಪಾಣತ್ತೂರಿನಿಂದ ಬೆಟ್ಟ ಗುಡ್ಡಗಳ ಮೂಲಕ ಹಾದು ಸುಳ್ಯಕ್ಕೆ ಬರಲಿದೆ.

ಈ ಯೋಜನೆಯ ವಿವರವಾದ ವರದಿ ಸುಳ್ಯನ್ಯೂಸ್.ಕಾಂ ನಲ್ಲಿ  ಈ ಹಿಂದೆ ಪ್ರಕಟವಾಗಿತ್ತು, ಅದರ ಲಿಂಕ್ ಇಲ್ಲಿದೆ

https://theruralmirror.com/?p=4541

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

12 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

13 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

16 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

20 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

20 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago