Advertisement
ಸುದ್ದಿಗಳು

ಲೋಕಸಭೆಯಲ್ಲಿ ಕಾಞಂಗಾಡ್-ಕಾಣಿಯೂರು ರೈಲ್ವೇ ಯೋಜನೆಯ ಸದ್ದು

Share

ಸುಳ್ಯ: ಹಲವು ವರ್ಷಗಳಿಂದ ಸದ್ದು ಮಾಡುತ್ತಿರುವ ಕಾಞಂಗಾಡ್-ಕಾಣಿಯೂರು ರೈಲ್ವೇ ಯೋಜನೆ ಇಂದು ಲೋಕಸಭೆಯಲ್ಲೂ ಸದ್ದು ಮಾಡಿತು. ಈ ಯೋಜನೆಯ ಬಗ್ಗೆ ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್ ರೈಲ್ವೇ ಸಚಿವಾಲಯದಲ್ಲಿ ಪ್ರಶ್ನೆ ಕೇಳಿದ್ದಾರೆ.

ಕಾಞಂಗಾಡ್-ಕಾಣಿಯೂರು ರೈಲ್ವೇ ಯೋಜನೆಯ ಸಮಗ್ರ ವಿವಿರ ನೀಡುವಂತೆ ಹಾಗೂ ಯೋಜನೆ ಯಾವ ಹಂತದಲ್ಲಿದೆ ಸೇರಿದಂತೆ ವಿವರನ್ನು ಲಿಖಿತ ಪ್ರಶ್ನೆ ಮೂಲಕ ರಾಜಮೋಹನ್ ಉಣ್ಣಿತ್ತಾನ್ ಕೇಳಿದ್ದಾರೆ. ಪ್ರಶ್ನೆಯಲ್ಲಿ ಈ  ರೈಲ್ವೇ ಯೋಜನೆ ಯಾವ ಹಂತದಲ್ಲಿದೆ , ಬಜೆಟ್ ನಲ್ಲಿ ಸರ್ವೆಗೆ ಅನುದಾನ ಲಭ್ಯವಾಗಿದೆಯೇ, ತೆಗೆದುಕೊಂಡಿರು ಕ್ರಮಗಳ ಬಗ್ಗೆ ಕೇಳಿದ್ದರು.

ಇದಕ್ಕೆ ಉತ್ತರ ನೀಡಿರುವ ರೈಲ್ವೇ ಸಚಿವ ಪಿಯೂಶ್ ಗೋಯಲ್, ಕಾಂಞಗಾಡ್-ಪಾಣತ್ತುರು-ಕಾಣಿಯೂರು ರೈಲ್ವೇ ಯೋಜನೆಗೆ 90.5 ಕಿಮೀ ಉದ್ದದ ಹಳಿ ಸರ್ವೆ ಕಾರ್ಯಕ್ಕೆ 2014-15 ರ ಬಜೆಟ್ ನಲ್ಲಿ ಹಣ ನೀಡಲಾಗಿದೆ.  ಇದರಲ್ಲಿ ಕೇರಳದ ಪ್ರದೇಶದ 40.5 ಕಿಮೀ ಸರ್ವೆ ಕಾರ್ಯ ಮುಗಿದಿದೆ. ಉಳಿದ ಕರ್ನಾಟಕದ ಭಾಗ 50 ಕಿಮೀ ಬಾಕಿ ಇದೆ. ಮುಂದೆ ಎಲ್ಲಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು  ಎಂದು ಲಿಖಿತವಾಗಿ ಹೇಳಿದ್ದಾರೆ.

 

 

ಏನಿದು  ಯೋಜನೆ ?

ಕಾಞಂಗಾಡು-ಕಾಣಿಯೂರು ರೈಲ್ಚೇ ಯೋಜನೆಯ ಪ್ರಾಥಮಿಕ ಸರ್ವೆ 2015 ರಲ್ಲಿ ಪೂರ್ತಿಗೊಂಡಿದ್ದು ಕೇಂದ್ರ ಮತ್ತು ರಾಜ್ಯ ಸರಕಾರಗಳ ಪಾಲುದಾರಿಕೆಯಲ್ಲಿ ಯೋಜನೆ ಅನುಷ್ಠಾನ ಮಾಡಬಹುದು ಎಂಬ ನಿಲುವನ್ನು ಕೇಂದ್ರ ಸರಕಾರ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ಭೂಸ್ವಾಧೀನ ಮತ್ತು ಇತರ ನಿರ್ಮಾಣ ಕಾಮಗಾರಿಗಳಿಗಾಗಿ ಬೇಕಾಗುವ ತನ್ನ ಪಾಲನ್ನು ನೀಡಲು ಸಿದ್ದ ಎಂದು ಕೇರಳ ಸರಕಾರ ಕಳೆದ ವರ್ಷ ಘೋಷಿಸಿ ರೈಲ್ವೇ ಸಚಿವಾಲಯಕ್ಕೆ ಪತ್ರ ನೀಡಿತ್ತು.

ಕಾಞಂಗಾಡ್‍ನಿಂದ ಪಾಣತ್ತೂರುವರೆಗೆ 40.5 ಕಿ.ಮಿ. ಮತ್ತು ಪಾಣತ್ತೂರಿನಿಂದ ಕಾಣಿಯೂರಿಗೆ 50 ಕಿ.ಮಿ. ಒಟ್ಟು 90.5 ಕಿ.ಮಿ. ಉದ್ದದ ಹಳಿ ನಿರ್ಮಿಸಿ ಮಲೆನಾಡ ತಪ್ಪಲ ಮೂಲಕ ರೈಲ್ವೇ ಸಂಪರ್ಕ ಸಾಧಿಸುವುದು ಯೋಜನೆಯ ಉದ್ದೇಶ. ಕಾಞಂಗಾಡ್‍ನಿಂದ  ಕೊಟ್ಟೋಡಿ, ಬಳಾಂತೋಡ್, ಪಾಣತ್ತೂರು, ಕಲ್ಲಪಳ್ಳಿ, ಆಲೆಟ್ಟಿ, ಸುಳ್ಯ ಮೂಲಕ ಕಾಣಿಯೂರಿನಲ್ಲಿ ಮಂಗಳೂರು-ಬೆಂಗಳೂರು ಹಳಿಯನ್ನು ಸಂಧಿಸಿ ರೈಲ್ವೇ ಸಂಪರ್ಕ ಸಾಧಿಸಲು ಯೋಜನೆ ರೂಪಿಸಲಾಗಿದೆ. ಕಾಞಂಗಾಡ್‍ನಿಂದ ಪಾಣತ್ತೂರುವರೆಗೆ ಹೆದ್ದಾರಿಗೆ ಸಮಾನಾಂತರವಾಗಿ ಬರುವ ಹಳಿಯು ಪಾಣತ್ತೂರಿನಿಂದ ಬೆಟ್ಟ ಗುಡ್ಡಗಳ ಮೂಲಕ ಹಾದು ಸುಳ್ಯಕ್ಕೆ ಬರಲಿದೆ.

ಈ ಯೋಜನೆಯ ವಿವರವಾದ ವರದಿ ಸುಳ್ಯನ್ಯೂಸ್.ಕಾಂ ನಲ್ಲಿ  ಈ ಹಿಂದೆ ಪ್ರಕಟವಾಗಿತ್ತು, ಅದರ ಲಿಂಕ್ ಇಲ್ಲಿದೆ

https://theruralmirror.com/?p=4541

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

6 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

7 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

17 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

17 hours ago