ಮಂಗಳೂರು : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಅಕ್ಟೋಬರ್ 23 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ ಹಾಗೂ ಬಂಟ್ವಾಳ ತಾಲೂಕು ಕಚೇರಿ, ಅ.24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ, ಅ. 25 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡುವರು. ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ.
ಅನಾಮಧೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : ಪೊಲೀಸ್ ಅಧೀಕ್ಷಕರ ಕಚೇರಿ -0824- 2429197, 9448390987, ಪೊಲೀಸ್ ಉಪಾಧೀಕ್ಷಕರ-1 ಕಚೇರಿ-0824-2453420, 8861688100, 9448530051, ಪೊಲೀಸ್ ಉಪಾಧೀಕ್ಷಕರ-2 ಕಚೇರಿ- 0824-2453420, 7026994128, ಪೊಲೀಸ್ ನಿರೀೀಕ್ಷಕರ ಕಚೇರಿ- 0824-2427237, 9449044377 ನ್ನು ಸಂಪರ್ಕಿಸಬೇಕು ಎಂದು ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…
ಇಂದ್ರಿಯ ನಿಗ್ರಹವನ್ನೊಳಗೊಂಡ ಬ್ರಹ್ಮಚರ್ಯವು ಕೇವಲ ಬಾಲ್ಯಕಾಲದ ನಿಬಂಧನೆಯಲ್ಲ. ಅದು ಅವಿವಾಹಿತರಿಗಷ್ಟೇ ಅಲ್ಲ, ವಿವಾಹಿತರಿಗೂ…
ಅಂತರ್ಮುಖಿಯಾಗಲು, ಆಧ್ಯಾತ್ಮದ ಹಾದಿಯಲ್ಲಿ ಮುನ್ನಡೆಯಲು ಚಾತುರ್ಮಾಸ ಉತ್ತಮ ಸಂದರ್ಭ. ಪ್ರಪಂಚವನ್ನು ಕತ್ತಲು ಮಾಡಿ…
ಈಗಿನಂತೆ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ…
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…