ಮಡಿಕೇರಿ : ಲೋಹದ ಏಣಿಗಳಿಂದ ಉಂಟಾಗುತ್ತಿರುವ ವಿದ್ಯುತ್ ಅವಘಡಗಳನ್ನು ತಪ್ಪಿಸಲು ಜಿಲ್ಲೆಯ ಕೃಷಿಕರು, ಬೆಳೆಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಬಳಸುವಂತೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ.
ಸುರಕ್ಷತೆಯ ದೃಷ್ಟಿಯಿಂದ ವಿದ್ಯುತ್ ವಾಹಕ ಲೋಹದ ಏಣಿಗಳಿಗೆ ಪರ್ಯಾಯವಾಗಿ ವಿದ್ಯುತ್ ನಿರೋಧಕ ವಸ್ತುಗಳಾದ ಫೈಬರ್, ಬಿದಿರು ಇತ್ಯಾದಿಗಳಿಂದ ನಿರ್ಮಿತವಾದ ಏಣಿ ಕೃಷಿ/ ತೋಟಗಾರಿಕೆ ಮತ್ತು ಇನ್ನಿತರೆ ಯಾವುದೇ ಚಟುವಟಿಕೆಗಳಿಗೆ ಬಳಸುವ ಅನಾಹುತವನ್ನು ತಪ್ಪಿಸುವಂತೆ ಸಲಹೆ ನೀಡಿದ್ದಾರೆ.
35 ಕಾರ್ಮಿಕರ ಸಾವು:
ಕೊಡಗು ಜಿಲ್ಲೆಯ ತೋಟಗಳಲ್ಲಿ ಲೋಹದ ಏಣಿಗಳನ್ನು ಬಳಸುವ ಸಂದರ್ಭ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಪ್ರವಾಹಿಸಿದ ಮಾನವ ಜೀವಹಾನಿ ಆಗುತ್ತಿರುವ ವಿಚಾರ ವರದಿಯಾಗಿದೆ. ಕಳೆದ ನಾಲ್ಕುವರೆ ವರ್ಷಗಳಲ್ಲಿ ಜಿಲ್ಲೆಯಲ್ಲಿ ಲೋಹದ ಏಣಿಗಳ ಬಳಕೆಯಿಂದ ವಿದ್ಯುತ್ ಸ್ಪರ್ಶಗೊಂಡು 35 ಕಾರ್ಮಿಕರು ಮೃತಪಟ್ಟಿದ್ದಾರೆ.
ತೋಟಗಳಲ್ಲಿ ಬಳಸುವ ಲೋಹದ ಏಣಿಗಳು ಉತ್ತಮ ವಿದ್ಯತ್ ವಾಹಕಗಳಾಗಿದ್ದು, ಇವುಗಳು ಎತ್ತರ ಸಾಮಾನ್ಯವಾಗಿ 20 ಅಡಿಗಿಂತಲೂ ಅಧಿಕವಾಗಿರುತ್ತದೆ. ಜಿಲ್ಲೆಯ ಕೆಲವು ತೋಟ/ ಎಸ್ಟೇಟ್ಗಳಲ್ಲಿ ಲೋಹದಿಂದ ನಿರ್ಮಿತವಾದ ಏಣಿಗಳ ಬದಲಾಗಿ ಫೈಬರ್, ಬಿದಿರು ಇತ್ಯಾದಿಗಳಿಂದ ನಿರ್ಮಿತವಾದ ವಿದ್ಯುತ್ ನಿರೋಧಕ ಏಣಿಗಳನ್ನು ಬಳಸಲಾಗತ್ತಿದ್ದು, ಅಲ್ಲದೆ ಇವುಗಳು ಶಾಖ ವಾಹಕಗಳಾಗಿರದೆ, ಕಠಿಣ ಹವಾಮಾನ ಪರಿಸ್ಥಿತಿಗೆ ಉನ್ನತ ಪ್ರತಿರೋಧ ಹೊಂದಿರರುತ್ತದೆ. ಲೋಹದಿಂದ ನಿರ್ಮಿತವಾದ ಏಣಿಗಳಿಗೆ ಹೋಲಿಸಿದಲ್ಲಿ ಈ ಏಣಿಗಳ ಬಳಕೆ ಅತ್ಯಂತ ಸುರಕ್ಷಿತವಾಗಿದೆ ಮತ್ತು ವಿದ್ಯುತ್ ಆಘಾತವಾಗುವ ಯಾವುದೇ ಸಾಧ್ಯತೆಗಳಿರುವುದಿಲ್ಲ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಯವರು ಮತ್ತು ಸೆಸ್ಕ್ ಇಇ ಅವರು ತಿಳಿಸಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…