ಮಡಿಕೇರಿ : ಲೋಹದ ಏಣಿಗಳಿಂದ ಉಂಟಾಗುತ್ತಿರುವ ವಿದ್ಯುತ್ ಅವಘಡಗಳನ್ನು ತಪ್ಪಿಸಲು ಜಿಲ್ಲೆಯ ಕೃಷಿಕರು, ಬೆಳೆಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಬಳಸುವಂತೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ.
ಸುರಕ್ಷತೆಯ ದೃಷ್ಟಿಯಿಂದ ವಿದ್ಯುತ್ ವಾಹಕ ಲೋಹದ ಏಣಿಗಳಿಗೆ ಪರ್ಯಾಯವಾಗಿ ವಿದ್ಯುತ್ ನಿರೋಧಕ ವಸ್ತುಗಳಾದ ಫೈಬರ್, ಬಿದಿರು ಇತ್ಯಾದಿಗಳಿಂದ ನಿರ್ಮಿತವಾದ ಏಣಿ ಕೃಷಿ/ ತೋಟಗಾರಿಕೆ ಮತ್ತು ಇನ್ನಿತರೆ ಯಾವುದೇ ಚಟುವಟಿಕೆಗಳಿಗೆ ಬಳಸುವ ಅನಾಹುತವನ್ನು ತಪ್ಪಿಸುವಂತೆ ಸಲಹೆ ನೀಡಿದ್ದಾರೆ.
35 ಕಾರ್ಮಿಕರ ಸಾವು:
ಕೊಡಗು ಜಿಲ್ಲೆಯ ತೋಟಗಳಲ್ಲಿ ಲೋಹದ ಏಣಿಗಳನ್ನು ಬಳಸುವ ಸಂದರ್ಭ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಪ್ರವಾಹಿಸಿದ ಮಾನವ ಜೀವಹಾನಿ ಆಗುತ್ತಿರುವ ವಿಚಾರ ವರದಿಯಾಗಿದೆ. ಕಳೆದ ನಾಲ್ಕುವರೆ ವರ್ಷಗಳಲ್ಲಿ ಜಿಲ್ಲೆಯಲ್ಲಿ ಲೋಹದ ಏಣಿಗಳ ಬಳಕೆಯಿಂದ ವಿದ್ಯುತ್ ಸ್ಪರ್ಶಗೊಂಡು 35 ಕಾರ್ಮಿಕರು ಮೃತಪಟ್ಟಿದ್ದಾರೆ.
ತೋಟಗಳಲ್ಲಿ ಬಳಸುವ ಲೋಹದ ಏಣಿಗಳು ಉತ್ತಮ ವಿದ್ಯತ್ ವಾಹಕಗಳಾಗಿದ್ದು, ಇವುಗಳು ಎತ್ತರ ಸಾಮಾನ್ಯವಾಗಿ 20 ಅಡಿಗಿಂತಲೂ ಅಧಿಕವಾಗಿರುತ್ತದೆ. ಜಿಲ್ಲೆಯ ಕೆಲವು ತೋಟ/ ಎಸ್ಟೇಟ್ಗಳಲ್ಲಿ ಲೋಹದಿಂದ ನಿರ್ಮಿತವಾದ ಏಣಿಗಳ ಬದಲಾಗಿ ಫೈಬರ್, ಬಿದಿರು ಇತ್ಯಾದಿಗಳಿಂದ ನಿರ್ಮಿತವಾದ ವಿದ್ಯುತ್ ನಿರೋಧಕ ಏಣಿಗಳನ್ನು ಬಳಸಲಾಗತ್ತಿದ್ದು, ಅಲ್ಲದೆ ಇವುಗಳು ಶಾಖ ವಾಹಕಗಳಾಗಿರದೆ, ಕಠಿಣ ಹವಾಮಾನ ಪರಿಸ್ಥಿತಿಗೆ ಉನ್ನತ ಪ್ರತಿರೋಧ ಹೊಂದಿರರುತ್ತದೆ. ಲೋಹದಿಂದ ನಿರ್ಮಿತವಾದ ಏಣಿಗಳಿಗೆ ಹೋಲಿಸಿದಲ್ಲಿ ಈ ಏಣಿಗಳ ಬಳಕೆ ಅತ್ಯಂತ ಸುರಕ್ಷಿತವಾಗಿದೆ ಮತ್ತು ವಿದ್ಯುತ್ ಆಘಾತವಾಗುವ ಯಾವುದೇ ಸಾಧ್ಯತೆಗಳಿರುವುದಿಲ್ಲ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಯವರು ಮತ್ತು ಸೆಸ್ಕ್ ಇಇ ಅವರು ತಿಳಿಸಿದ್ದಾರೆ.
ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…