Advertisement
ಜಿಲ್ಲೆ

ಲೋಹದ ಏಣಿಗಳ ಬಳಕೆಯಲ್ಲಿ ಎಚ್ಚರಿಕೆ ಇರಲಿ

Share

ಮಡಿಕೇರಿ : ಲೋಹದ ಏಣಿಗಳಿಂದ ಉಂಟಾಗುತ್ತಿರುವ ವಿದ್ಯುತ್ ಅವಘಡಗಳನ್ನು ತಪ್ಪಿಸಲು ಜಿಲ್ಲೆಯ ಕೃಷಿಕರು, ಬೆಳೆಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಬಳಸುವಂತೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ.

ಸುರಕ್ಷತೆಯ ದೃಷ್ಟಿಯಿಂದ ವಿದ್ಯುತ್ ವಾಹಕ ಲೋಹದ ಏಣಿಗಳಿಗೆ ಪರ್ಯಾಯವಾಗಿ ವಿದ್ಯುತ್ ನಿರೋಧಕ ವಸ್ತುಗಳಾದ ಫೈಬರ್, ಬಿದಿರು ಇತ್ಯಾದಿಗಳಿಂದ ನಿರ್ಮಿತವಾದ ಏಣಿ ಕೃಷಿ/ ತೋಟಗಾರಿಕೆ ಮತ್ತು ಇನ್ನಿತರೆ ಯಾವುದೇ ಚಟುವಟಿಕೆಗಳಿಗೆ ಬಳಸುವ ಅನಾಹುತವನ್ನು ತಪ್ಪಿಸುವಂತೆ ಸಲಹೆ ನೀಡಿದ್ದಾರೆ.

35 ಕಾರ್ಮಿಕರ ಸಾವು:

ಕೊಡಗು ಜಿಲ್ಲೆಯ ತೋಟಗಳಲ್ಲಿ ಲೋಹದ ಏಣಿಗಳನ್ನು ಬಳಸುವ ಸಂದರ್ಭ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಪ್ರವಾಹಿಸಿದ ಮಾನವ ಜೀವಹಾನಿ ಆಗುತ್ತಿರುವ ವಿಚಾರ ವರದಿಯಾಗಿದೆ. ಕಳೆದ ನಾಲ್ಕುವರೆ ವರ್ಷಗಳಲ್ಲಿ ಜಿಲ್ಲೆಯಲ್ಲಿ ಲೋಹದ ಏಣಿಗಳ ಬಳಕೆಯಿಂದ ವಿದ್ಯುತ್ ಸ್ಪರ್ಶಗೊಂಡು 35 ಕಾರ್ಮಿಕರು ಮೃತಪಟ್ಟಿದ್ದಾರೆ.
ತೋಟಗಳಲ್ಲಿ ಬಳಸುವ ಲೋಹದ ಏಣಿಗಳು ಉತ್ತಮ ವಿದ್ಯತ್ ವಾಹಕಗಳಾಗಿದ್ದು, ಇವುಗಳು ಎತ್ತರ ಸಾಮಾನ್ಯವಾಗಿ 20 ಅಡಿಗಿಂತಲೂ ಅಧಿಕವಾಗಿರುತ್ತದೆ. ಜಿಲ್ಲೆಯ ಕೆಲವು ತೋಟ/ ಎಸ್ಟೇಟ್‍ಗಳಲ್ಲಿ ಲೋಹದಿಂದ ನಿರ್ಮಿತವಾದ ಏಣಿಗಳ ಬದಲಾಗಿ ಫೈಬರ್, ಬಿದಿರು ಇತ್ಯಾದಿಗಳಿಂದ ನಿರ್ಮಿತವಾದ ವಿದ್ಯುತ್ ನಿರೋಧಕ ಏಣಿಗಳನ್ನು ಬಳಸಲಾಗತ್ತಿದ್ದು, ಅಲ್ಲದೆ ಇವುಗಳು ಶಾಖ ವಾಹಕಗಳಾಗಿರದೆ, ಕಠಿಣ ಹವಾಮಾನ ಪರಿಸ್ಥಿತಿಗೆ ಉನ್ನತ ಪ್ರತಿರೋಧ ಹೊಂದಿರರುತ್ತದೆ. ಲೋಹದಿಂದ ನಿರ್ಮಿತವಾದ ಏಣಿಗಳಿಗೆ ಹೋಲಿಸಿದಲ್ಲಿ ಈ ಏಣಿಗಳ ಬಳಕೆ ಅತ್ಯಂತ ಸುರಕ್ಷಿತವಾಗಿದೆ ಮತ್ತು ವಿದ್ಯುತ್ ಆಘಾತವಾಗುವ ಯಾವುದೇ ಸಾಧ್ಯತೆಗಳಿರುವುದಿಲ್ಲ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಯವರು ಮತ್ತು ಸೆಸ್ಕ್ ಇಇ ಅವರು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಮೆರಿಕ-ಇರಾನ್ ಯುದ್ಧ ಮತ್ತೆ ಭುಗಿಲೇ..? ಕದನ ವಿರಾಮ ಅಂತ್ಯ ಎಂದ ಟ್ರಂಪ್ – ಹೊಸ ದಾಳಿಗಳಿಂದ ಜಾಗತಿಕ ಆತಂಕ

ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…

1 minute ago

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

13 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

16 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

20 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

23 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

24 hours ago