Advertisement
ಸುದ್ದಿಗಳು

ವರದಿ ಸಲ್ಲಿಸಲಾಗಿದೆ…. ಮಾಹಿತಿ ನೀಡಲಾಗಿದೆ…. ಪರಿಶೀಲನೆ ನಡೆಸಲಾಗಿದೆ….!

Share

ಸುಳ್ಯ: ತಾಲೂಕು ಪಂಚಾಯತ್ ಸಾಮಾನ್ಯ ಸಭೆ ಮಂಗಳವಾರ ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು. ಗಂಭೀರವಾದ ಸಮಸ್ಯೆಯೊಂದಕ್ಕೆ ಅಧಿಕಾರಿಗಳು ಉತ್ತರಿಸಿದ್ದು ಹೀಗೆ, ಸಂಬಂಧಪಟ್ಟವರಿಗೆ ವರದಿ ಸಲ್ಲಿಸಲಾಗಿದೆ…..ಮಾಹಿತಿ ನೀಡಲಾಗಿದೆ…. ಪರಿಶೀಲನೆ ನಡೆಸಲಾಗಿದೆ…. ಜಿಲ್ಲಾಧಿಕಾರಿಗಳ ಗಮನಕ್ಕೂ ಬಂದಿದೆ…!. ಕ್ರಮ ಕೈಗೊಳ್ಳಲಾಗಿದೆ ಎಂಬ ವರದಿ ಯಾವಾಗ ಬರುವುದು ಎಂಬ ಪ್ರಶ್ನೆಗೆ ಮೌನವೇ ಉತ್ತರ…!

ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ಅಶೋಕ್ ನೆಕ್ರಾಜೆ ಸುಬ್ರಹ್ಮಣ್ಯದ ಲಾಡ್ಜ್ ಗಳಿಂದ ತ್ಯಾಜ್ಯ ನೀರು ನದಿಗೆ ಹರಿಯುತ್ತಿರುವುದರ ಕುರಿತು ಹಲವು ತಿಂಗಳ ಹಿಂದೆಯೇ ಸಭೆಯಲ್ಲಿ ಪ್ರಸ್ತಾಪಿಸಿ ಕ್ರಮಕ್ಕೆ ಆಗ್ರಹಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ಈ ಕುರಿತು ಪ್ರತಿಕ್ರಿಯಿಸಿದ ತಾಲೂಕು ಆರೋಗ್ಯಾಧಿಕಾರಿಗಳು,  ಸುಬ್ರಹ್ಮಣ್ಯ ಮತ್ತು ಸುಳ್ಯದಲ್ಲಿ ನದಿಗಳಿಗೆ ತ್ಯಾಜ್ಯ ಮತ್ತು ಕೊಳಚೆ ಬಿಡುವುದು ಕಂಡು ಬಂದಿದೆ. ಈ ಕುರಿತು ಸಂಬಂಧಪಟ್ಟವರಿಗೆ ವರದಿ ಸಲ್ಲಿಸಲಾಗಿದ್ದು. ಗ್ರಾಮ ಪಂಚಾಯತ್ ಅಥವಾ ನಗರ ಪಂಚಾಯತ್ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸುಬ್ರಹ್ಮಣ್ಯದಲ್ಲಿ ಕೊಳಚೆ ನೀರು ನದಿಗೆ ಬಿಡುವುದರ ಬಗ್ಗೆ ಜಿಲ್ಲಾಧಿಕಾರಿಯವರ ಗಮನಕ್ಕೂ ಬಂದಿದೆ. ಹಿಂದಿನ ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದ್ದರು ಎಂದು ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಸಭೆಗೆ ತಿಳಿಸಿದರು.

ನೀರು ಕಲುಷಿತಗೊಂಡು ಆರೋಗ್ಯದ ಸಮಸ್ಯೆ ಉಂಟಾಗುವ ಗಂಭೀರ ವಿಷಯವಾಗಿದ್ದರೂ ಅಧಿಕಾರಿಗಳು ಕೇವಲ ನೋಟೀಸ್ ನೀಡಿ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿದ್ದಾರೆ ಎಂದು ಸದಸ್ಯರಾದ ಅಶೋಕ್ ನೆಕ್ರಾಜೆ, ಅಬ್ದುಲ್ ಗಫೂರ್ ಹೇಳಿದರು.

ಕೆಲವು ಕಡೆ ರಬ್ಬರ್ ಫ್ಯಾಕ್ಟರಿಗಳಿಂದಲೂ ಕೊಳಚೆ ನದಿಗೆ ಬಿಡುವ ಪ್ರಸಂಗ ಕಂಡು ಬಂದಿದ್ದು ಇದರ ಕುರಿತು ಸೂಕ್ತವಾದ ಕ್ರಮ ಜರುಗಿಸಬೇಕು ಎಂದು ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಒತ್ತಾಯಿಸಿದರು.

ಈ ಕುರಿತು ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚಿಸಿದ ಅಧ್ಯಕ್ಷ ಚನಿಯ ಕಲ್ತಡ್ಕ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಪ್ರಕೃತಿ ವಿಕೋಪ ವರದಿಯಿಂದ ಸಮಸ್ಯೆ ಸೃಷ್ಠಿಸಬೇಡಿ: ಪ್ರಕೃತಿ ವಿಕೋಪದಡಿಯಲ್ಲಿ ಮನೆ ಹಾನಿಯಾದವರಿಗೆ ಸೂಕ್ತ ಪರಿಹಾರ ಸಿಗುವ ನಿಟ್ಟಿನಲ್ಲಿ ಸಮರ್ಪಕ ವರದಿ ಕೊಡಿ. ಮನೆ ಭಾಗಷಃ ಹಾನಿಯಾಗಿದೆ ಎಂಬ ವರದಿಯಿಂದ ಜನರಿಗೆ ತೊಂದರೆ ಉಂಟಾಗುತಿದೆ ಎಂದು ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ ಹೇಳಿದರು. ಒಂದು ಮನೆಯ ಗೋಡೆ ಅಥವಾ ಇತರ ಪ್ರಮುಖ ಭಾಗಗಳಿಗೆ ಹಾನಿ ಆಗಿದ್ದರೆ ಅಂತಹಾ ಮನೆಯಲ್ಲಿ ವಾಸಿಸಲು ಸಾಧ್ಯವಾಗುವುದಿಲ್ಲ. ಅಂತಹಾ ಸಂದರ್ಭದಲ್ಲಿ ಭಾಗಷಃ ಹಾನಿ ಅಂತ ವರದಿ ನೀಡಿದರೆ ಫಲಾನುಭವಿಗಳಿಗೆ ಅನ್ಯಾಯ ಆಗುತ್ತದೆ. ವರದಿಯಿಂದ ಫಲನುಭವಿಗಳಿಗೆ ಸಮಸ್ಯೆ ಸೃಷ್ಠಿಸಬೇಡಿ. ಅಂತಹಾ ಸಂದರ್ಭದಲ್ಲಿ ಮಾನವೀಯ ನೆಲೆಯಲ್ಲಿ ಸರಿಯಾದ ವರದಿಯನ್ನು ಕೊಡಿ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹೇಳಿದರು.

ಇದಕ್ಕೆ ಉತ್ತರಿಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಸರಕಾರದ ನಿರ್ದೇಶನದಂತೆ ಮನೆ ಹಾನಿಯನ್ನು ದಾಖಲಿಸಲಾಗುತ್ತಿದ್ದು ತಾಲೂಕಿನಲ್ಲಿ ಒಟ್ಟು 74 ಮನೆಗಳಿಗೆ ಹಾನಿಯಾಗಿದೆ ಎಂದು ಗುರುತಿಸಲಾಗಿದೆ ಇದರಲ್ಲಿ 21 ಮನೆಗಳು ಪೂರ್ಣ ಹಾನಿ ಸಂಭವಿಸಿದೆ. ಏಳು ಕುಟುಂಬಗಳಿಗೆ ತಲಾ 10 ಸಾವಿರದಂತೆ ತುರ್ತು ಪರಿಹಾರ ನೀಡಲಾಗಿದೆ ಎಂದು ವಿವರಿಸಿದರು. ಉಳಿದ ಮನೆಗಳ ಜಿಪಿಎಸ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಹಂತ ಹಂತವಾಗಿ ಫಲಾನುಭವಿಗಳ ಖಾತೆಗೆ ಸಹಾಯ ಧನ ಜಮೆ ಆಗಲಿದೆ. ಕಲ್ಮಕಾರಿನಲ್ಲಿ ಗುಡ್ಡ ಕುಸಿತ ಆಗುವ ಅಪಾಯವಿರುವ ಪ್ರದೇಶದ ಜನರಿಗೆ ಮನೆ ನಿರ್ಮಿಸಲು ಬೇರೆ ಕಡೆ ಸ್ಥಳ ಗುರುತಿಸಲಾಗಿದ್ದು ಅವರಿಗೆ ಹೊಸ ಮನೆ ನಿರ್ಮಾಣ ಅಗಲಿದೆ ಎಂದರು. ಮನೆ ನಾಶವಾದ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಯಾವುದಾದರು ದಾಖಲೆಗಳ ಅಥವಾ ತಾಂತ್ರಿಕ ತೊಂದರೆ ಉಂಟಾದರೆ ಅದನ್ನು ಕಂದಾಯ ಇಲಾಖೆಯೇ ಸರಿಪಡಿಸಿ ನೀಡುವಂತೆ ಅಧ್ಯಕ್ಷರು ಸೂಚಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

6 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

20 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

21 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago