Advertisement
ಸುದ್ದಿಗಳು

ವರದಿ ಸಲ್ಲಿಸಲಾಗಿದೆ…. ಮಾಹಿತಿ ನೀಡಲಾಗಿದೆ…. ಪರಿಶೀಲನೆ ನಡೆಸಲಾಗಿದೆ….!

Share

ಸುಳ್ಯ: ತಾಲೂಕು ಪಂಚಾಯತ್ ಸಾಮಾನ್ಯ ಸಭೆ ಮಂಗಳವಾರ ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು. ಗಂಭೀರವಾದ ಸಮಸ್ಯೆಯೊಂದಕ್ಕೆ ಅಧಿಕಾರಿಗಳು ಉತ್ತರಿಸಿದ್ದು ಹೀಗೆ, ಸಂಬಂಧಪಟ್ಟವರಿಗೆ ವರದಿ ಸಲ್ಲಿಸಲಾಗಿದೆ…..ಮಾಹಿತಿ ನೀಡಲಾಗಿದೆ…. ಪರಿಶೀಲನೆ ನಡೆಸಲಾಗಿದೆ…. ಜಿಲ್ಲಾಧಿಕಾರಿಗಳ ಗಮನಕ್ಕೂ ಬಂದಿದೆ…!. ಕ್ರಮ ಕೈಗೊಳ್ಳಲಾಗಿದೆ ಎಂಬ ವರದಿ ಯಾವಾಗ ಬರುವುದು ಎಂಬ ಪ್ರಶ್ನೆಗೆ ಮೌನವೇ ಉತ್ತರ…!

ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ಅಶೋಕ್ ನೆಕ್ರಾಜೆ ಸುಬ್ರಹ್ಮಣ್ಯದ ಲಾಡ್ಜ್ ಗಳಿಂದ ತ್ಯಾಜ್ಯ ನೀರು ನದಿಗೆ ಹರಿಯುತ್ತಿರುವುದರ ಕುರಿತು ಹಲವು ತಿಂಗಳ ಹಿಂದೆಯೇ ಸಭೆಯಲ್ಲಿ ಪ್ರಸ್ತಾಪಿಸಿ ಕ್ರಮಕ್ಕೆ ಆಗ್ರಹಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ಈ ಕುರಿತು ಪ್ರತಿಕ್ರಿಯಿಸಿದ ತಾಲೂಕು ಆರೋಗ್ಯಾಧಿಕಾರಿಗಳು,  ಸುಬ್ರಹ್ಮಣ್ಯ ಮತ್ತು ಸುಳ್ಯದಲ್ಲಿ ನದಿಗಳಿಗೆ ತ್ಯಾಜ್ಯ ಮತ್ತು ಕೊಳಚೆ ಬಿಡುವುದು ಕಂಡು ಬಂದಿದೆ. ಈ ಕುರಿತು ಸಂಬಂಧಪಟ್ಟವರಿಗೆ ವರದಿ ಸಲ್ಲಿಸಲಾಗಿದ್ದು. ಗ್ರಾಮ ಪಂಚಾಯತ್ ಅಥವಾ ನಗರ ಪಂಚಾಯತ್ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸುಬ್ರಹ್ಮಣ್ಯದಲ್ಲಿ ಕೊಳಚೆ ನೀರು ನದಿಗೆ ಬಿಡುವುದರ ಬಗ್ಗೆ ಜಿಲ್ಲಾಧಿಕಾರಿಯವರ ಗಮನಕ್ಕೂ ಬಂದಿದೆ. ಹಿಂದಿನ ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದ್ದರು ಎಂದು ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಸಭೆಗೆ ತಿಳಿಸಿದರು.

ನೀರು ಕಲುಷಿತಗೊಂಡು ಆರೋಗ್ಯದ ಸಮಸ್ಯೆ ಉಂಟಾಗುವ ಗಂಭೀರ ವಿಷಯವಾಗಿದ್ದರೂ ಅಧಿಕಾರಿಗಳು ಕೇವಲ ನೋಟೀಸ್ ನೀಡಿ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿದ್ದಾರೆ ಎಂದು ಸದಸ್ಯರಾದ ಅಶೋಕ್ ನೆಕ್ರಾಜೆ, ಅಬ್ದುಲ್ ಗಫೂರ್ ಹೇಳಿದರು.

ಕೆಲವು ಕಡೆ ರಬ್ಬರ್ ಫ್ಯಾಕ್ಟರಿಗಳಿಂದಲೂ ಕೊಳಚೆ ನದಿಗೆ ಬಿಡುವ ಪ್ರಸಂಗ ಕಂಡು ಬಂದಿದ್ದು ಇದರ ಕುರಿತು ಸೂಕ್ತವಾದ ಕ್ರಮ ಜರುಗಿಸಬೇಕು ಎಂದು ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಒತ್ತಾಯಿಸಿದರು.

ಈ ಕುರಿತು ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚಿಸಿದ ಅಧ್ಯಕ್ಷ ಚನಿಯ ಕಲ್ತಡ್ಕ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಪ್ರಕೃತಿ ವಿಕೋಪ ವರದಿಯಿಂದ ಸಮಸ್ಯೆ ಸೃಷ್ಠಿಸಬೇಡಿ: ಪ್ರಕೃತಿ ವಿಕೋಪದಡಿಯಲ್ಲಿ ಮನೆ ಹಾನಿಯಾದವರಿಗೆ ಸೂಕ್ತ ಪರಿಹಾರ ಸಿಗುವ ನಿಟ್ಟಿನಲ್ಲಿ ಸಮರ್ಪಕ ವರದಿ ಕೊಡಿ. ಮನೆ ಭಾಗಷಃ ಹಾನಿಯಾಗಿದೆ ಎಂಬ ವರದಿಯಿಂದ ಜನರಿಗೆ ತೊಂದರೆ ಉಂಟಾಗುತಿದೆ ಎಂದು ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ ಹೇಳಿದರು. ಒಂದು ಮನೆಯ ಗೋಡೆ ಅಥವಾ ಇತರ ಪ್ರಮುಖ ಭಾಗಗಳಿಗೆ ಹಾನಿ ಆಗಿದ್ದರೆ ಅಂತಹಾ ಮನೆಯಲ್ಲಿ ವಾಸಿಸಲು ಸಾಧ್ಯವಾಗುವುದಿಲ್ಲ. ಅಂತಹಾ ಸಂದರ್ಭದಲ್ಲಿ ಭಾಗಷಃ ಹಾನಿ ಅಂತ ವರದಿ ನೀಡಿದರೆ ಫಲಾನುಭವಿಗಳಿಗೆ ಅನ್ಯಾಯ ಆಗುತ್ತದೆ. ವರದಿಯಿಂದ ಫಲನುಭವಿಗಳಿಗೆ ಸಮಸ್ಯೆ ಸೃಷ್ಠಿಸಬೇಡಿ. ಅಂತಹಾ ಸಂದರ್ಭದಲ್ಲಿ ಮಾನವೀಯ ನೆಲೆಯಲ್ಲಿ ಸರಿಯಾದ ವರದಿಯನ್ನು ಕೊಡಿ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹೇಳಿದರು.

ಇದಕ್ಕೆ ಉತ್ತರಿಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಸರಕಾರದ ನಿರ್ದೇಶನದಂತೆ ಮನೆ ಹಾನಿಯನ್ನು ದಾಖಲಿಸಲಾಗುತ್ತಿದ್ದು ತಾಲೂಕಿನಲ್ಲಿ ಒಟ್ಟು 74 ಮನೆಗಳಿಗೆ ಹಾನಿಯಾಗಿದೆ ಎಂದು ಗುರುತಿಸಲಾಗಿದೆ ಇದರಲ್ಲಿ 21 ಮನೆಗಳು ಪೂರ್ಣ ಹಾನಿ ಸಂಭವಿಸಿದೆ. ಏಳು ಕುಟುಂಬಗಳಿಗೆ ತಲಾ 10 ಸಾವಿರದಂತೆ ತುರ್ತು ಪರಿಹಾರ ನೀಡಲಾಗಿದೆ ಎಂದು ವಿವರಿಸಿದರು. ಉಳಿದ ಮನೆಗಳ ಜಿಪಿಎಸ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಹಂತ ಹಂತವಾಗಿ ಫಲಾನುಭವಿಗಳ ಖಾತೆಗೆ ಸಹಾಯ ಧನ ಜಮೆ ಆಗಲಿದೆ. ಕಲ್ಮಕಾರಿನಲ್ಲಿ ಗುಡ್ಡ ಕುಸಿತ ಆಗುವ ಅಪಾಯವಿರುವ ಪ್ರದೇಶದ ಜನರಿಗೆ ಮನೆ ನಿರ್ಮಿಸಲು ಬೇರೆ ಕಡೆ ಸ್ಥಳ ಗುರುತಿಸಲಾಗಿದ್ದು ಅವರಿಗೆ ಹೊಸ ಮನೆ ನಿರ್ಮಾಣ ಅಗಲಿದೆ ಎಂದರು. ಮನೆ ನಾಶವಾದ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಯಾವುದಾದರು ದಾಖಲೆಗಳ ಅಥವಾ ತಾಂತ್ರಿಕ ತೊಂದರೆ ಉಂಟಾದರೆ ಅದನ್ನು ಕಂದಾಯ ಇಲಾಖೆಯೇ ಸರಿಪಡಿಸಿ ನೀಡುವಂತೆ ಅಧ್ಯಕ್ಷರು ಸೂಚಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

11 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

12 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

13 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

18 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

20 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

1 day ago