Advertisement
ಸುದ್ದಿಗಳು

ವರುಣದಲ್ಲಿ ಸೋಮಣ್ಣಗೆ ಮತ್ತೆ “ತಪರಾಕಿ”- ಗ್ರಾಮಕ್ಕೆ ಬರಲು ಬಿಡದೆ “ಗೇಟ್ ಪಾಸ್”

Share

ಮೈಸೂರು- ಸಿದ್ದರಾಮಯ್ಯ ಅಖಾಡಕ್ಕೆ ಇಳಿದಿರುವ ಮೈಸೂರಿನ ವರುಣದಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣಗೆ ಮತದಾರರು ಮತ್ತೆ ತಪರಾಕಿ ಹಾಕಿದ್ದಾರೆ.

 

“ಸಂವಿಧಾನ ಬದಲಾಯಿಸುವವರು ನಮ್ಮೂರಿಗೆ ಬರಬೇಡಿ” ಎಂದ ಗ್ರಾಮಸ್ಥರು ವರುಣ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣನಿಗೆ ಗೇಟ್ ಪಾಸ್ ಕೊಟ್ಟಿದ್ದಾರೆ.ಸಂವಿಧಾನ ಬದಲಿಸುವ ಬಿಜೆಪಿ ಪಕ್ಷದ ಅಭ್ಯರ್ಥಿಗೆ ನಮ್ಮೂರಿಗೆ ನೋ ಎಂಟ್ರಿ ಎಂದಿದ್ದಾರೆ.

ನಂಜನಗೂಡು ತಾಲೂಕಿನ ವರುಣ ಕ್ಷೇತ್ರದ ಬಿಳುಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಂಡಿರುವ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ. ಬ್ಯಾಜ್ ಟು ಬ್ಯಾಕ್ ವಿರೋಧ ವ್ಯಕ್ತವಾಗಿದೆ.

“ಗ್ರಾಮಕ್ಕೆ ಬರುವುದಕ್ಕಿಂತ ಮುಂಚೆ ಗೇಟ್ ಪಾಸ್ ಕೊಟ್ಟಿಧದಾರೆ.  ಬಿಳುಗಲಿ ಗ್ರಾಮದ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಜಮಾಯಿಸಿದ ಯುವಕರು ಸೋಮಣ್ಣಗೆ ಧಿಕ್ಕಾರ ಕೂಗಿದ್ದಾರೆ.
ಡಾ.ಬಿ.ಆರ್ ಅಂಬೇಡ್ಕರ್ ರಿಗೆ ಜಯಘೋಷ ಕೂಗಿದ್ದಾರೆ. ಸಂವಿಧಾನ ಬದಲಿಸ್ತೀವಿ ಅಂದ್ರೆ ಸುಮ್ಮನಿರಲ್ಲ. ಅಂಬೇಡ್ಕರ್ ವಿರೋಧಿಗಳೆ ನಮ್ಮೂರಿಗೆ ಬರಲು ನಿಮಗೆ ನೈತಿಕತೆ ಇಲ್ಲ.
ಸಂವಿಧಾನದ ಅಡಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ‌. ಸಂವಿಧಾನದ ಅಡಿಯಲ್ಲಿ ಸರ್ಕಾರ ನಡೆಸುವ ಇವರು ಸಂವಿಧಾನ ಬದಲಾಯಿಸುತ್ತೇವೆ ಅಂತಾರೆ. ಇಂತಹ ಸಂವಿಧಾನ ವಿರೋಧಿ ಬಿಜೆಪಿ ಪಕ್ಷಕ್ಕೆ ನಾವು ಮತ ಹಾಕಬೇಕಾ..? ಸಂವಿಧಾನ ಚೇಂಜ್ ಮಾಡಲು ಇವರು ಯಾರು” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಬಿಜೆಪಿ ಮುಖಂಡರು ಕಾರ್ಯಕರ್ತರಿಗೆ ಗ್ರಾಮಸ್ಥರಿಂದ ಪ್ರಶ್ನೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮನವೊಲಿಕೆಗೆ ಯತ್ನಿಸಿದರು. ಆದರೆ ಪಟ್ಟು ಬಿಡದ ಯುವಕರು, ಗ್ರಾಮಸ್ಥರು ಒಪ್ಪಲಿಲ್ಲ. ಈ ವೇಳೆ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.

ಇದರಿಂದ ಸೋಮಣ್ಣ  ಗ್ರಾಮಕ್ಕೆ ಬಾರದೆ ಹೊರಟು ಹೋದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

5 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

12 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

15 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

24 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

24 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago