Advertisement
ಸುದ್ದಿಗಳು

ವರುಣದಲ್ಲಿ ಸೋಮಣ್ಣಗೆ ಮತ್ತೆ “ತಪರಾಕಿ”- ಗ್ರಾಮಕ್ಕೆ ಬರಲು ಬಿಡದೆ “ಗೇಟ್ ಪಾಸ್”

Share

ಮೈಸೂರು- ಸಿದ್ದರಾಮಯ್ಯ ಅಖಾಡಕ್ಕೆ ಇಳಿದಿರುವ ಮೈಸೂರಿನ ವರುಣದಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣಗೆ ಮತದಾರರು ಮತ್ತೆ ತಪರಾಕಿ ಹಾಕಿದ್ದಾರೆ.

 

“ಸಂವಿಧಾನ ಬದಲಾಯಿಸುವವರು ನಮ್ಮೂರಿಗೆ ಬರಬೇಡಿ” ಎಂದ ಗ್ರಾಮಸ್ಥರು ವರುಣ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣನಿಗೆ ಗೇಟ್ ಪಾಸ್ ಕೊಟ್ಟಿದ್ದಾರೆ.ಸಂವಿಧಾನ ಬದಲಿಸುವ ಬಿಜೆಪಿ ಪಕ್ಷದ ಅಭ್ಯರ್ಥಿಗೆ ನಮ್ಮೂರಿಗೆ ನೋ ಎಂಟ್ರಿ ಎಂದಿದ್ದಾರೆ.

ನಂಜನಗೂಡು ತಾಲೂಕಿನ ವರುಣ ಕ್ಷೇತ್ರದ ಬಿಳುಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಂಡಿರುವ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ. ಬ್ಯಾಜ್ ಟು ಬ್ಯಾಕ್ ವಿರೋಧ ವ್ಯಕ್ತವಾಗಿದೆ.

“ಗ್ರಾಮಕ್ಕೆ ಬರುವುದಕ್ಕಿಂತ ಮುಂಚೆ ಗೇಟ್ ಪಾಸ್ ಕೊಟ್ಟಿಧದಾರೆ.  ಬಿಳುಗಲಿ ಗ್ರಾಮದ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಜಮಾಯಿಸಿದ ಯುವಕರು ಸೋಮಣ್ಣಗೆ ಧಿಕ್ಕಾರ ಕೂಗಿದ್ದಾರೆ.
ಡಾ.ಬಿ.ಆರ್ ಅಂಬೇಡ್ಕರ್ ರಿಗೆ ಜಯಘೋಷ ಕೂಗಿದ್ದಾರೆ. ಸಂವಿಧಾನ ಬದಲಿಸ್ತೀವಿ ಅಂದ್ರೆ ಸುಮ್ಮನಿರಲ್ಲ. ಅಂಬೇಡ್ಕರ್ ವಿರೋಧಿಗಳೆ ನಮ್ಮೂರಿಗೆ ಬರಲು ನಿಮಗೆ ನೈತಿಕತೆ ಇಲ್ಲ.
ಸಂವಿಧಾನದ ಅಡಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ‌. ಸಂವಿಧಾನದ ಅಡಿಯಲ್ಲಿ ಸರ್ಕಾರ ನಡೆಸುವ ಇವರು ಸಂವಿಧಾನ ಬದಲಾಯಿಸುತ್ತೇವೆ ಅಂತಾರೆ. ಇಂತಹ ಸಂವಿಧಾನ ವಿರೋಧಿ ಬಿಜೆಪಿ ಪಕ್ಷಕ್ಕೆ ನಾವು ಮತ ಹಾಕಬೇಕಾ..? ಸಂವಿಧಾನ ಚೇಂಜ್ ಮಾಡಲು ಇವರು ಯಾರು” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಬಿಜೆಪಿ ಮುಖಂಡರು ಕಾರ್ಯಕರ್ತರಿಗೆ ಗ್ರಾಮಸ್ಥರಿಂದ ಪ್ರಶ್ನೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮನವೊಲಿಕೆಗೆ ಯತ್ನಿಸಿದರು. ಆದರೆ ಪಟ್ಟು ಬಿಡದ ಯುವಕರು, ಗ್ರಾಮಸ್ಥರು ಒಪ್ಪಲಿಲ್ಲ. ಈ ವೇಳೆ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.

ಇದರಿಂದ ಸೋಮಣ್ಣ  ಗ್ರಾಮಕ್ಕೆ ಬಾರದೆ ಹೊರಟು ಹೋದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

5 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

11 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

20 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

22 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago