Advertisement
ಸುದ್ದಿಗಳು

ವರುಣದಲ್ಲಿ ಸೋಮಣ್ಣಗೆ ಮತ್ತೆ “ತಪರಾಕಿ”- ಗ್ರಾಮಕ್ಕೆ ಬರಲು ಬಿಡದೆ “ಗೇಟ್ ಪಾಸ್”

Share

ಮೈಸೂರು- ಸಿದ್ದರಾಮಯ್ಯ ಅಖಾಡಕ್ಕೆ ಇಳಿದಿರುವ ಮೈಸೂರಿನ ವರುಣದಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣಗೆ ಮತದಾರರು ಮತ್ತೆ ತಪರಾಕಿ ಹಾಕಿದ್ದಾರೆ.

 

“ಸಂವಿಧಾನ ಬದಲಾಯಿಸುವವರು ನಮ್ಮೂರಿಗೆ ಬರಬೇಡಿ” ಎಂದ ಗ್ರಾಮಸ್ಥರು ವರುಣ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣನಿಗೆ ಗೇಟ್ ಪಾಸ್ ಕೊಟ್ಟಿದ್ದಾರೆ.ಸಂವಿಧಾನ ಬದಲಿಸುವ ಬಿಜೆಪಿ ಪಕ್ಷದ ಅಭ್ಯರ್ಥಿಗೆ ನಮ್ಮೂರಿಗೆ ನೋ ಎಂಟ್ರಿ ಎಂದಿದ್ದಾರೆ.

ನಂಜನಗೂಡು ತಾಲೂಕಿನ ವರುಣ ಕ್ಷೇತ್ರದ ಬಿಳುಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಂಡಿರುವ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ. ಬ್ಯಾಜ್ ಟು ಬ್ಯಾಕ್ ವಿರೋಧ ವ್ಯಕ್ತವಾಗಿದೆ.

“ಗ್ರಾಮಕ್ಕೆ ಬರುವುದಕ್ಕಿಂತ ಮುಂಚೆ ಗೇಟ್ ಪಾಸ್ ಕೊಟ್ಟಿಧದಾರೆ.  ಬಿಳುಗಲಿ ಗ್ರಾಮದ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಜಮಾಯಿಸಿದ ಯುವಕರು ಸೋಮಣ್ಣಗೆ ಧಿಕ್ಕಾರ ಕೂಗಿದ್ದಾರೆ.
ಡಾ.ಬಿ.ಆರ್ ಅಂಬೇಡ್ಕರ್ ರಿಗೆ ಜಯಘೋಷ ಕೂಗಿದ್ದಾರೆ. ಸಂವಿಧಾನ ಬದಲಿಸ್ತೀವಿ ಅಂದ್ರೆ ಸುಮ್ಮನಿರಲ್ಲ. ಅಂಬೇಡ್ಕರ್ ವಿರೋಧಿಗಳೆ ನಮ್ಮೂರಿಗೆ ಬರಲು ನಿಮಗೆ ನೈತಿಕತೆ ಇಲ್ಲ.
ಸಂವಿಧಾನದ ಅಡಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ‌. ಸಂವಿಧಾನದ ಅಡಿಯಲ್ಲಿ ಸರ್ಕಾರ ನಡೆಸುವ ಇವರು ಸಂವಿಧಾನ ಬದಲಾಯಿಸುತ್ತೇವೆ ಅಂತಾರೆ. ಇಂತಹ ಸಂವಿಧಾನ ವಿರೋಧಿ ಬಿಜೆಪಿ ಪಕ್ಷಕ್ಕೆ ನಾವು ಮತ ಹಾಕಬೇಕಾ..? ಸಂವಿಧಾನ ಚೇಂಜ್ ಮಾಡಲು ಇವರು ಯಾರು” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಬಿಜೆಪಿ ಮುಖಂಡರು ಕಾರ್ಯಕರ್ತರಿಗೆ ಗ್ರಾಮಸ್ಥರಿಂದ ಪ್ರಶ್ನೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮನವೊಲಿಕೆಗೆ ಯತ್ನಿಸಿದರು. ಆದರೆ ಪಟ್ಟು ಬಿಡದ ಯುವಕರು, ಗ್ರಾಮಸ್ಥರು ಒಪ್ಪಲಿಲ್ಲ. ಈ ವೇಳೆ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.

ಇದರಿಂದ ಸೋಮಣ್ಣ  ಗ್ರಾಮಕ್ಕೆ ಬಾರದೆ ಹೊರಟು ಹೋದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago