ಮೈಸೂರು- ಸಿದ್ದರಾಮಯ್ಯ ಅಖಾಡಕ್ಕೆ ಇಳಿದಿರುವ ಮೈಸೂರಿನ ವರುಣದಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣಗೆ ಮತದಾರರು ಮತ್ತೆ ತಪರಾಕಿ ಹಾಕಿದ್ದಾರೆ.
“ಸಂವಿಧಾನ ಬದಲಾಯಿಸುವವರು ನಮ್ಮೂರಿಗೆ ಬರಬೇಡಿ” ಎಂದ ಗ್ರಾಮಸ್ಥರು ವರುಣ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣನಿಗೆ ಗೇಟ್ ಪಾಸ್ ಕೊಟ್ಟಿದ್ದಾರೆ.ಸಂವಿಧಾನ ಬದಲಿಸುವ ಬಿಜೆಪಿ ಪಕ್ಷದ ಅಭ್ಯರ್ಥಿಗೆ ನಮ್ಮೂರಿಗೆ ನೋ ಎಂಟ್ರಿ ಎಂದಿದ್ದಾರೆ.
ನಂಜನಗೂಡು ತಾಲೂಕಿನ ವರುಣ ಕ್ಷೇತ್ರದ ಬಿಳುಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಂಡಿರುವ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ. ಬ್ಯಾಜ್ ಟು ಬ್ಯಾಕ್ ವಿರೋಧ ವ್ಯಕ್ತವಾಗಿದೆ.
“ಗ್ರಾಮಕ್ಕೆ ಬರುವುದಕ್ಕಿಂತ ಮುಂಚೆ ಗೇಟ್ ಪಾಸ್ ಕೊಟ್ಟಿಧದಾರೆ. ಬಿಳುಗಲಿ ಗ್ರಾಮದ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಜಮಾಯಿಸಿದ ಯುವಕರು ಸೋಮಣ್ಣಗೆ ಧಿಕ್ಕಾರ ಕೂಗಿದ್ದಾರೆ.
ಡಾ.ಬಿ.ಆರ್ ಅಂಬೇಡ್ಕರ್ ರಿಗೆ ಜಯಘೋಷ ಕೂಗಿದ್ದಾರೆ. ಸಂವಿಧಾನ ಬದಲಿಸ್ತೀವಿ ಅಂದ್ರೆ ಸುಮ್ಮನಿರಲ್ಲ. ಅಂಬೇಡ್ಕರ್ ವಿರೋಧಿಗಳೆ ನಮ್ಮೂರಿಗೆ ಬರಲು ನಿಮಗೆ ನೈತಿಕತೆ ಇಲ್ಲ.
ಸಂವಿಧಾನದ ಅಡಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸಂವಿಧಾನದ ಅಡಿಯಲ್ಲಿ ಸರ್ಕಾರ ನಡೆಸುವ ಇವರು ಸಂವಿಧಾನ ಬದಲಾಯಿಸುತ್ತೇವೆ ಅಂತಾರೆ. ಇಂತಹ ಸಂವಿಧಾನ ವಿರೋಧಿ ಬಿಜೆಪಿ ಪಕ್ಷಕ್ಕೆ ನಾವು ಮತ ಹಾಕಬೇಕಾ..? ಸಂವಿಧಾನ ಚೇಂಜ್ ಮಾಡಲು ಇವರು ಯಾರು” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಬಿಜೆಪಿ ಮುಖಂಡರು ಕಾರ್ಯಕರ್ತರಿಗೆ ಗ್ರಾಮಸ್ಥರಿಂದ ಪ್ರಶ್ನೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮನವೊಲಿಕೆಗೆ ಯತ್ನಿಸಿದರು. ಆದರೆ ಪಟ್ಟು ಬಿಡದ ಯುವಕರು, ಗ್ರಾಮಸ್ಥರು ಒಪ್ಪಲಿಲ್ಲ. ಈ ವೇಳೆ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.
ಇದರಿಂದ ಸೋಮಣ್ಣ ಗ್ರಾಮಕ್ಕೆ ಬಾರದೆ ಹೊರಟು ಹೋದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…