Advertisement
ಸುದ್ದಿಗಳು

ವರ್ಗಾವಣೆಗೊಂಡ ತಹಶೀಲ್ದಾರ್‌ ಎನ್.ಎ.ಕುಂಞಿ ಅಹಮ್ಮದ್ ಗೆ ನ.ಪಂ.ನಲ್ಲಿ ಬೀಳ್ಕೊಡುಗೆ

Share

ಸುಳ್ಯ: ಸುಳ್ಯ ತಹಶೀಲ್ದಾರ್ ಕುಂಞಿ ಆಹಮ್ಮದ್ ಅವರಿಗೆ ವರ್ಗಾವಣೆಯಾಗಿರುವ ಹಿನ್ನಲೆಯಲ್ಲಿ ಸುಳ್ಯ ನ.ಪಂ. ಹಾಗೂ ಸ್ವಚ್ಛ ನಗರ ಸುಳ್ಯ ತಂಡದ ವತಿಯಿಂದ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಯಿತು.

Advertisement

ಜನರ ಕಷ್ಟಗಳಿಗೆ ಸಾಧ್ಯವಾದಷ್ಟು ಸ್ಪಂದಿಸಿದ್ದೇನೆ. ವರ್ಗಾವಣೆಯ ಬಳಿಕ ಜನರ ಪ್ರತಿಕ್ರಿಯೆ ಕಂಡು ವಿಸ್ಮಯಗೊಂಡಿದ್ದೇನೆ. ಸಾವಿರಾರು ಜನ ಫೋನ್ ಮಾಡಿದ್ದಾರೆ. ತಾಯಂದಿರು, ಸಹೋದರಿಯರು ಸಂದೇಶ ಕಳುಹಿಸಿದ್ದಾರೆ. ಸುಳ್ಯದಲ್ಲಿದ್ದಷ್ಟೂ ಸಮಯ ಸಮರ್ಪಣ ಭಾವದಿಂದ ಕೆಲಸ ಮಾಡಿದ ತೃಪ್ತಿ ನನಗಿದೆ. ಪ್ರತಿದಿನವೂ ಎಷ್ಟೇ ಜನ ಬಂದರೂ ಅವರೊಂದಿಗೆ ಮಾತನಾಡಿದ್ದೇನೆ. ನಾನಿರೋದೆ ಹೀಗೆ, ಇದೇ ನನ್ನ ಶೈಲಿ’ ಎಂದು ಕುಂಞಿ ಅಹಮ್ಮದ್ ಹೇಳಿದರು. ಸುಳ್ಯ ನಗರದ ಆಡಳಿತಾಧಿಕಾರಿಯಾಗಿ ಅನೇಕ ಯೋಜನೆಗಳಿಗೆ ಪ್ರಯತ್ನಿಸಿದ್ದೇನೆ. ಶಾಶ್ವತ ಕುಡಿಯುವ ನೀರಿನ ಯೋಜನೆ, ಕುಡಿಯುವ ನೀರಿನ ಘಟಕ, ಸುಸಜ್ಜಿತ ಮಾಂಸ ಮಾರುಕಟ್ಟೆ ಸಂಕೀರ್ಣ, ಅಂಬೇಡ್ಕರ್ ಪುತ್ಥಳಿ ಸೇರಿದಂತೆ ಯೋಜನೆಗಳು ಸಿದ್ಧವಾಗಿದೆ. ಮುಂದಿನ ಆಡಳಿತದವರು ಇದಕ್ಕೆ ಪ್ರಯತ್ನ ಪಡಬೇಕು. ಇನ್ನೂ ಸ್ವಲ್ಪ ಸಮಯ ಸುಳ್ಯದಲ್ಲಿದ್ದಿದ್ದರೆ ಸುಳ್ಯದ ಚಿತ್ರಣವನ್ನೆ ಬದಲಿಸಬಹುದಿತ್ತು ಎಂದು ಹೇಳಿದರು.

ಸುಳ್ಯ ನ.ಪಂ. ಮುಖ್ಯಾಧಿಕಾರಿ ಮತ್ತಡಿ, ನ.ಪಂ. ಸದಸ್ಯರಾದ ಎಂ. ವೆಂಕಪ್ಪ ಗೌಡ, ವಿನಯ ಕುಮಾರ್ ಕಂದಡ್ಕ, ಸರೋಜಿನಿ ಪೆಲತ್ತಡ್ಕ, ಸ್ವಚ್ಛ ನಗರ ತಂಡದ ಪಿ.ಬಿ. ಸುಧಾಕರ್ ರೈ, ವಿನೋದ್ ಲಸ್ರಾದೊ, ನ.ಪಂ. ಇಂಜಿನಿಯರ್ ಶಿವಕುಮಾರ್, ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆ, ನ.ಪಂ. ಉದ್ಯೋಗಿ ಸುದೇವ್ ಜಯನಗರ ಮೊದಲಾದವರು ಮಾತನಾಡಿದರು.

ಆರೋಗ್ಯಾಧಿಕಾರಿ ರವಿಕೃಷ್ಣ ಸ್ವಾಗತಿಸಿ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ತಿಮ್ಮಪ್ಪ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

10 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

16 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

20 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

20 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

21 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago