Advertisement
ಸುದ್ದಿಗಳು

ವರ್ಗಾವಣೆಗೊಂಡ ತಹಶೀಲ್ದಾರ್‌ ಎನ್.ಎ.ಕುಂಞಿ ಅಹಮ್ಮದ್ ಗೆ ನ.ಪಂ.ನಲ್ಲಿ ಬೀಳ್ಕೊಡುಗೆ

Share

ಸುಳ್ಯ: ಸುಳ್ಯ ತಹಶೀಲ್ದಾರ್ ಕುಂಞಿ ಆಹಮ್ಮದ್ ಅವರಿಗೆ ವರ್ಗಾವಣೆಯಾಗಿರುವ ಹಿನ್ನಲೆಯಲ್ಲಿ ಸುಳ್ಯ ನ.ಪಂ. ಹಾಗೂ ಸ್ವಚ್ಛ ನಗರ ಸುಳ್ಯ ತಂಡದ ವತಿಯಿಂದ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಯಿತು.

Advertisement
Advertisement
Advertisement
Advertisement

ಜನರ ಕಷ್ಟಗಳಿಗೆ ಸಾಧ್ಯವಾದಷ್ಟು ಸ್ಪಂದಿಸಿದ್ದೇನೆ. ವರ್ಗಾವಣೆಯ ಬಳಿಕ ಜನರ ಪ್ರತಿಕ್ರಿಯೆ ಕಂಡು ವಿಸ್ಮಯಗೊಂಡಿದ್ದೇನೆ. ಸಾವಿರಾರು ಜನ ಫೋನ್ ಮಾಡಿದ್ದಾರೆ. ತಾಯಂದಿರು, ಸಹೋದರಿಯರು ಸಂದೇಶ ಕಳುಹಿಸಿದ್ದಾರೆ. ಸುಳ್ಯದಲ್ಲಿದ್ದಷ್ಟೂ ಸಮಯ ಸಮರ್ಪಣ ಭಾವದಿಂದ ಕೆಲಸ ಮಾಡಿದ ತೃಪ್ತಿ ನನಗಿದೆ. ಪ್ರತಿದಿನವೂ ಎಷ್ಟೇ ಜನ ಬಂದರೂ ಅವರೊಂದಿಗೆ ಮಾತನಾಡಿದ್ದೇನೆ. ನಾನಿರೋದೆ ಹೀಗೆ, ಇದೇ ನನ್ನ ಶೈಲಿ’ ಎಂದು ಕುಂಞಿ ಅಹಮ್ಮದ್ ಹೇಳಿದರು. ಸುಳ್ಯ ನಗರದ ಆಡಳಿತಾಧಿಕಾರಿಯಾಗಿ ಅನೇಕ ಯೋಜನೆಗಳಿಗೆ ಪ್ರಯತ್ನಿಸಿದ್ದೇನೆ. ಶಾಶ್ವತ ಕುಡಿಯುವ ನೀರಿನ ಯೋಜನೆ, ಕುಡಿಯುವ ನೀರಿನ ಘಟಕ, ಸುಸಜ್ಜಿತ ಮಾಂಸ ಮಾರುಕಟ್ಟೆ ಸಂಕೀರ್ಣ, ಅಂಬೇಡ್ಕರ್ ಪುತ್ಥಳಿ ಸೇರಿದಂತೆ ಯೋಜನೆಗಳು ಸಿದ್ಧವಾಗಿದೆ. ಮುಂದಿನ ಆಡಳಿತದವರು ಇದಕ್ಕೆ ಪ್ರಯತ್ನ ಪಡಬೇಕು. ಇನ್ನೂ ಸ್ವಲ್ಪ ಸಮಯ ಸುಳ್ಯದಲ್ಲಿದ್ದಿದ್ದರೆ ಸುಳ್ಯದ ಚಿತ್ರಣವನ್ನೆ ಬದಲಿಸಬಹುದಿತ್ತು ಎಂದು ಹೇಳಿದರು.

Advertisement

ಸುಳ್ಯ ನ.ಪಂ. ಮುಖ್ಯಾಧಿಕಾರಿ ಮತ್ತಡಿ, ನ.ಪಂ. ಸದಸ್ಯರಾದ ಎಂ. ವೆಂಕಪ್ಪ ಗೌಡ, ವಿನಯ ಕುಮಾರ್ ಕಂದಡ್ಕ, ಸರೋಜಿನಿ ಪೆಲತ್ತಡ್ಕ, ಸ್ವಚ್ಛ ನಗರ ತಂಡದ ಪಿ.ಬಿ. ಸುಧಾಕರ್ ರೈ, ವಿನೋದ್ ಲಸ್ರಾದೊ, ನ.ಪಂ. ಇಂಜಿನಿಯರ್ ಶಿವಕುಮಾರ್, ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆ, ನ.ಪಂ. ಉದ್ಯೋಗಿ ಸುದೇವ್ ಜಯನಗರ ಮೊದಲಾದವರು ಮಾತನಾಡಿದರು.

ಆರೋಗ್ಯಾಧಿಕಾರಿ ರವಿಕೃಷ್ಣ ಸ್ವಾಗತಿಸಿ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ತಿಮ್ಮಪ್ಪ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

7 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

8 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

9 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

18 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

18 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

18 hours ago