Advertisement
ಸುದ್ದಿಗಳು

ವರ್ಗಾವಣೆಗೊಂಡ ತಹಶೀಲ್ದಾರ್‌ ಎನ್.ಎ.ಕುಂಞಿ ಅಹಮ್ಮದ್ ಗೆ ನ.ಪಂ.ನಲ್ಲಿ ಬೀಳ್ಕೊಡುಗೆ

Share

ಸುಳ್ಯ: ಸುಳ್ಯ ತಹಶೀಲ್ದಾರ್ ಕುಂಞಿ ಆಹಮ್ಮದ್ ಅವರಿಗೆ ವರ್ಗಾವಣೆಯಾಗಿರುವ ಹಿನ್ನಲೆಯಲ್ಲಿ ಸುಳ್ಯ ನ.ಪಂ. ಹಾಗೂ ಸ್ವಚ್ಛ ನಗರ ಸುಳ್ಯ ತಂಡದ ವತಿಯಿಂದ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಯಿತು.

ಜನರ ಕಷ್ಟಗಳಿಗೆ ಸಾಧ್ಯವಾದಷ್ಟು ಸ್ಪಂದಿಸಿದ್ದೇನೆ. ವರ್ಗಾವಣೆಯ ಬಳಿಕ ಜನರ ಪ್ರತಿಕ್ರಿಯೆ ಕಂಡು ವಿಸ್ಮಯಗೊಂಡಿದ್ದೇನೆ. ಸಾವಿರಾರು ಜನ ಫೋನ್ ಮಾಡಿದ್ದಾರೆ. ತಾಯಂದಿರು, ಸಹೋದರಿಯರು ಸಂದೇಶ ಕಳುಹಿಸಿದ್ದಾರೆ. ಸುಳ್ಯದಲ್ಲಿದ್ದಷ್ಟೂ ಸಮಯ ಸಮರ್ಪಣ ಭಾವದಿಂದ ಕೆಲಸ ಮಾಡಿದ ತೃಪ್ತಿ ನನಗಿದೆ. ಪ್ರತಿದಿನವೂ ಎಷ್ಟೇ ಜನ ಬಂದರೂ ಅವರೊಂದಿಗೆ ಮಾತನಾಡಿದ್ದೇನೆ. ನಾನಿರೋದೆ ಹೀಗೆ, ಇದೇ ನನ್ನ ಶೈಲಿ’ ಎಂದು ಕುಂಞಿ ಅಹಮ್ಮದ್ ಹೇಳಿದರು. ಸುಳ್ಯ ನಗರದ ಆಡಳಿತಾಧಿಕಾರಿಯಾಗಿ ಅನೇಕ ಯೋಜನೆಗಳಿಗೆ ಪ್ರಯತ್ನಿಸಿದ್ದೇನೆ. ಶಾಶ್ವತ ಕುಡಿಯುವ ನೀರಿನ ಯೋಜನೆ, ಕುಡಿಯುವ ನೀರಿನ ಘಟಕ, ಸುಸಜ್ಜಿತ ಮಾಂಸ ಮಾರುಕಟ್ಟೆ ಸಂಕೀರ್ಣ, ಅಂಬೇಡ್ಕರ್ ಪುತ್ಥಳಿ ಸೇರಿದಂತೆ ಯೋಜನೆಗಳು ಸಿದ್ಧವಾಗಿದೆ. ಮುಂದಿನ ಆಡಳಿತದವರು ಇದಕ್ಕೆ ಪ್ರಯತ್ನ ಪಡಬೇಕು. ಇನ್ನೂ ಸ್ವಲ್ಪ ಸಮಯ ಸುಳ್ಯದಲ್ಲಿದ್ದಿದ್ದರೆ ಸುಳ್ಯದ ಚಿತ್ರಣವನ್ನೆ ಬದಲಿಸಬಹುದಿತ್ತು ಎಂದು ಹೇಳಿದರು.

ಸುಳ್ಯ ನ.ಪಂ. ಮುಖ್ಯಾಧಿಕಾರಿ ಮತ್ತಡಿ, ನ.ಪಂ. ಸದಸ್ಯರಾದ ಎಂ. ವೆಂಕಪ್ಪ ಗೌಡ, ವಿನಯ ಕುಮಾರ್ ಕಂದಡ್ಕ, ಸರೋಜಿನಿ ಪೆಲತ್ತಡ್ಕ, ಸ್ವಚ್ಛ ನಗರ ತಂಡದ ಪಿ.ಬಿ. ಸುಧಾಕರ್ ರೈ, ವಿನೋದ್ ಲಸ್ರಾದೊ, ನ.ಪಂ. ಇಂಜಿನಿಯರ್ ಶಿವಕುಮಾರ್, ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆ, ನ.ಪಂ. ಉದ್ಯೋಗಿ ಸುದೇವ್ ಜಯನಗರ ಮೊದಲಾದವರು ಮಾತನಾಡಿದರು.

ಆರೋಗ್ಯಾಧಿಕಾರಿ ರವಿಕೃಷ್ಣ ಸ್ವಾಗತಿಸಿ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ತಿಮ್ಮಪ್ಪ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

1 hour ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

18 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

20 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago