Advertisement
ಸುದ್ದಿಗಳು

ವರ್ಗಾವಣೆಗೊಂಡ ತಹಶೀಲ್ದಾರ್‌ ಎನ್.ಎ.ಕುಂಞಿ ಅಹಮ್ಮದ್ ಗೆ ನ.ಪಂ.ನಲ್ಲಿ ಬೀಳ್ಕೊಡುಗೆ

Share

ಸುಳ್ಯ: ಸುಳ್ಯ ತಹಶೀಲ್ದಾರ್ ಕುಂಞಿ ಆಹಮ್ಮದ್ ಅವರಿಗೆ ವರ್ಗಾವಣೆಯಾಗಿರುವ ಹಿನ್ನಲೆಯಲ್ಲಿ ಸುಳ್ಯ ನ.ಪಂ. ಹಾಗೂ ಸ್ವಚ್ಛ ನಗರ ಸುಳ್ಯ ತಂಡದ ವತಿಯಿಂದ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಯಿತು.

ಜನರ ಕಷ್ಟಗಳಿಗೆ ಸಾಧ್ಯವಾದಷ್ಟು ಸ್ಪಂದಿಸಿದ್ದೇನೆ. ವರ್ಗಾವಣೆಯ ಬಳಿಕ ಜನರ ಪ್ರತಿಕ್ರಿಯೆ ಕಂಡು ವಿಸ್ಮಯಗೊಂಡಿದ್ದೇನೆ. ಸಾವಿರಾರು ಜನ ಫೋನ್ ಮಾಡಿದ್ದಾರೆ. ತಾಯಂದಿರು, ಸಹೋದರಿಯರು ಸಂದೇಶ ಕಳುಹಿಸಿದ್ದಾರೆ. ಸುಳ್ಯದಲ್ಲಿದ್ದಷ್ಟೂ ಸಮಯ ಸಮರ್ಪಣ ಭಾವದಿಂದ ಕೆಲಸ ಮಾಡಿದ ತೃಪ್ತಿ ನನಗಿದೆ. ಪ್ರತಿದಿನವೂ ಎಷ್ಟೇ ಜನ ಬಂದರೂ ಅವರೊಂದಿಗೆ ಮಾತನಾಡಿದ್ದೇನೆ. ನಾನಿರೋದೆ ಹೀಗೆ, ಇದೇ ನನ್ನ ಶೈಲಿ’ ಎಂದು ಕುಂಞಿ ಅಹಮ್ಮದ್ ಹೇಳಿದರು. ಸುಳ್ಯ ನಗರದ ಆಡಳಿತಾಧಿಕಾರಿಯಾಗಿ ಅನೇಕ ಯೋಜನೆಗಳಿಗೆ ಪ್ರಯತ್ನಿಸಿದ್ದೇನೆ. ಶಾಶ್ವತ ಕುಡಿಯುವ ನೀರಿನ ಯೋಜನೆ, ಕುಡಿಯುವ ನೀರಿನ ಘಟಕ, ಸುಸಜ್ಜಿತ ಮಾಂಸ ಮಾರುಕಟ್ಟೆ ಸಂಕೀರ್ಣ, ಅಂಬೇಡ್ಕರ್ ಪುತ್ಥಳಿ ಸೇರಿದಂತೆ ಯೋಜನೆಗಳು ಸಿದ್ಧವಾಗಿದೆ. ಮುಂದಿನ ಆಡಳಿತದವರು ಇದಕ್ಕೆ ಪ್ರಯತ್ನ ಪಡಬೇಕು. ಇನ್ನೂ ಸ್ವಲ್ಪ ಸಮಯ ಸುಳ್ಯದಲ್ಲಿದ್ದಿದ್ದರೆ ಸುಳ್ಯದ ಚಿತ್ರಣವನ್ನೆ ಬದಲಿಸಬಹುದಿತ್ತು ಎಂದು ಹೇಳಿದರು.

ಸುಳ್ಯ ನ.ಪಂ. ಮುಖ್ಯಾಧಿಕಾರಿ ಮತ್ತಡಿ, ನ.ಪಂ. ಸದಸ್ಯರಾದ ಎಂ. ವೆಂಕಪ್ಪ ಗೌಡ, ವಿನಯ ಕುಮಾರ್ ಕಂದಡ್ಕ, ಸರೋಜಿನಿ ಪೆಲತ್ತಡ್ಕ, ಸ್ವಚ್ಛ ನಗರ ತಂಡದ ಪಿ.ಬಿ. ಸುಧಾಕರ್ ರೈ, ವಿನೋದ್ ಲಸ್ರಾದೊ, ನ.ಪಂ. ಇಂಜಿನಿಯರ್ ಶಿವಕುಮಾರ್, ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆ, ನ.ಪಂ. ಉದ್ಯೋಗಿ ಸುದೇವ್ ಜಯನಗರ ಮೊದಲಾದವರು ಮಾತನಾಡಿದರು.

ಆರೋಗ್ಯಾಧಿಕಾರಿ ರವಿಕೃಷ್ಣ ಸ್ವಾಗತಿಸಿ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ತಿಮ್ಮಪ್ಪ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

17 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago