Advertisement
ಸುದ್ದಿಗಳು

ವರ್ಗಾವಣೆಗೊಂಡ ತಹಶೀಲ್ದಾರ್‌ ಎನ್.ಎ.ಕುಂಞಿ ಅಹಮ್ಮದ್ ಗೆ ನ.ಪಂ.ನಲ್ಲಿ ಬೀಳ್ಕೊಡುಗೆ

Share

ಸುಳ್ಯ: ಸುಳ್ಯ ತಹಶೀಲ್ದಾರ್ ಕುಂಞಿ ಆಹಮ್ಮದ್ ಅವರಿಗೆ ವರ್ಗಾವಣೆಯಾಗಿರುವ ಹಿನ್ನಲೆಯಲ್ಲಿ ಸುಳ್ಯ ನ.ಪಂ. ಹಾಗೂ ಸ್ವಚ್ಛ ನಗರ ಸುಳ್ಯ ತಂಡದ ವತಿಯಿಂದ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಯಿತು.

ಜನರ ಕಷ್ಟಗಳಿಗೆ ಸಾಧ್ಯವಾದಷ್ಟು ಸ್ಪಂದಿಸಿದ್ದೇನೆ. ವರ್ಗಾವಣೆಯ ಬಳಿಕ ಜನರ ಪ್ರತಿಕ್ರಿಯೆ ಕಂಡು ವಿಸ್ಮಯಗೊಂಡಿದ್ದೇನೆ. ಸಾವಿರಾರು ಜನ ಫೋನ್ ಮಾಡಿದ್ದಾರೆ. ತಾಯಂದಿರು, ಸಹೋದರಿಯರು ಸಂದೇಶ ಕಳುಹಿಸಿದ್ದಾರೆ. ಸುಳ್ಯದಲ್ಲಿದ್ದಷ್ಟೂ ಸಮಯ ಸಮರ್ಪಣ ಭಾವದಿಂದ ಕೆಲಸ ಮಾಡಿದ ತೃಪ್ತಿ ನನಗಿದೆ. ಪ್ರತಿದಿನವೂ ಎಷ್ಟೇ ಜನ ಬಂದರೂ ಅವರೊಂದಿಗೆ ಮಾತನಾಡಿದ್ದೇನೆ. ನಾನಿರೋದೆ ಹೀಗೆ, ಇದೇ ನನ್ನ ಶೈಲಿ’ ಎಂದು ಕುಂಞಿ ಅಹಮ್ಮದ್ ಹೇಳಿದರು. ಸುಳ್ಯ ನಗರದ ಆಡಳಿತಾಧಿಕಾರಿಯಾಗಿ ಅನೇಕ ಯೋಜನೆಗಳಿಗೆ ಪ್ರಯತ್ನಿಸಿದ್ದೇನೆ. ಶಾಶ್ವತ ಕುಡಿಯುವ ನೀರಿನ ಯೋಜನೆ, ಕುಡಿಯುವ ನೀರಿನ ಘಟಕ, ಸುಸಜ್ಜಿತ ಮಾಂಸ ಮಾರುಕಟ್ಟೆ ಸಂಕೀರ್ಣ, ಅಂಬೇಡ್ಕರ್ ಪುತ್ಥಳಿ ಸೇರಿದಂತೆ ಯೋಜನೆಗಳು ಸಿದ್ಧವಾಗಿದೆ. ಮುಂದಿನ ಆಡಳಿತದವರು ಇದಕ್ಕೆ ಪ್ರಯತ್ನ ಪಡಬೇಕು. ಇನ್ನೂ ಸ್ವಲ್ಪ ಸಮಯ ಸುಳ್ಯದಲ್ಲಿದ್ದಿದ್ದರೆ ಸುಳ್ಯದ ಚಿತ್ರಣವನ್ನೆ ಬದಲಿಸಬಹುದಿತ್ತು ಎಂದು ಹೇಳಿದರು.

Advertisement

ಸುಳ್ಯ ನ.ಪಂ. ಮುಖ್ಯಾಧಿಕಾರಿ ಮತ್ತಡಿ, ನ.ಪಂ. ಸದಸ್ಯರಾದ ಎಂ. ವೆಂಕಪ್ಪ ಗೌಡ, ವಿನಯ ಕುಮಾರ್ ಕಂದಡ್ಕ, ಸರೋಜಿನಿ ಪೆಲತ್ತಡ್ಕ, ಸ್ವಚ್ಛ ನಗರ ತಂಡದ ಪಿ.ಬಿ. ಸುಧಾಕರ್ ರೈ, ವಿನೋದ್ ಲಸ್ರಾದೊ, ನ.ಪಂ. ಇಂಜಿನಿಯರ್ ಶಿವಕುಮಾರ್, ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆ, ನ.ಪಂ. ಉದ್ಯೋಗಿ ಸುದೇವ್ ಜಯನಗರ ಮೊದಲಾದವರು ಮಾತನಾಡಿದರು.

ಆರೋಗ್ಯಾಧಿಕಾರಿ ರವಿಕೃಷ್ಣ ಸ್ವಾಗತಿಸಿ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ತಿಮ್ಮಪ್ಪ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago