Advertisement
ಸಾಹಿತ್ಯ

ವರ್ಧಮಾನ ಉದಯೋನ್ಮುಖ ಪ್ರಶಸ್ತಿ ಪುರಸ್ಕಾರಕ್ಕೆ ಡಾ.ದೀಪಾ ಫಡ್ಕೆ ಆಯ್ಕೆ

Share

ಮಂಗಳೂರು: ಮೂಡಬಿದರೆಯ ವರ್ಧಮಾನ ಪೀಠ ನೀಡುವ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ ಪುರಸ್ಕಾರಕ್ಕೆ ಡಾ. ದೀಪಾ ಫಡ್ಕೆ ಆಯ್ಕೆಯಾಗಿದ್ದಾರೆ  ಹಾಗೂ ವರ್ಧಮಾನ ಪುರಸ್ಕಾರಕ್ಕೆ ಡಾ.ಬಸವರಾಜ ಕಲ್ಗುಡಿ  ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕಳೆದ 39 ವರ್ಷಗಳಿಂದ ಮೂಡುಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠದ  ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ಜೀವಮಾನದ ಸಾಧನೆಗೆ ಹಿರಿಯ ಸಾಹಿತಿಗಳ ಕೃತಿಗೆ  ವರ್ಧಮಾನ ಪುರಸ್ಕಾರ ಹಾಗೂ ಉದಯೋನ್ಮುಖ ಬರಹಗಾರರು ಅಥವಾ ಸಾಹಿತಿಗಳಿಗೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ  ನೀಡಲಾಗುತ್ತಿದೆ.

 

ಡಾ.ದೀಪಾ ಫಡ್ಕೆ :

ದೀಪಾ ಫಡ್ಕೆ ಬೆಂಗಳೂರು, ಮೂಲತ: ದಕ್ಷಿಣ ಕನ್ನಡದ ಬೆಳ್ತಂಗಡಿಯವರು. ಇವರ ಇದುವರೆಗಿನ ಪ್ರಕಟಿತ ಕೃತಿಗಳು ಸಂಸ್ಕೃತಿ ಕುರಿತ ಬರಹಗಳ ಗುಚ್ಛವಾದ `ಋತ’, ಇವರ ಮೊದಲ ಕೃತಿ. `ಹರಪನಹಳ್ಳಿ ಭೀಮವ್ವ’ ಸೇರಿದಂತೆ ಒಟ್ಟು 7 ಕೃತಿಗಳು ಪ್ರಕಟವಾಗಿವೆ. ನಾಡಿನ ಪ್ರಮುಖ ಪತ್ರಿಕೆಗಳಾದ ಪ್ರಜಾವಾಣಿ, ವಿಜಯವಾಣಿ, ಉದಯವಾಣಿ, ವಿಜಯ ಕರ್ನಾಟಕ, ಹೊಸದಿಗಂತ, ಅಡ್ವೈಸರ್, ಕೊಳಲು, ತಿಲ್ಲಾನಗಳಿಗೆ ಅನೇಕ ಲೇಖನಗಳನ್ನು ಬರೆದಿದ್ದಾರೆ. ದೀಪಾ ಅವರ ಸಣ್ಣ ಕಥೆಗಳು ಮಯೂರ ಹಾಗೂ ಉದಯವಾಣಿಯಲ್ಲಿ ಪ್ರಕಟವಾಗಿದ್ದೂ ಅವರ `ತಾಯಾಗೋದು ಅಂದ್ರೆ’ ಕಥೆಗೆ ಬೆಂಗಳೂರಿನ ಕನ್ನಡ ಸಂಘರ್ಷ ಸಮಿತಿಯ ಅನುಪಮಾ ನಿರಂಜನ ಕಥಾಸ್ಪರ್ಧೆಯಲ್ಲಿ ಬಹುಮಾನ ಲಭಿಸಿದೆ.

 

ಡಾ.ಬಸವರಾಜ ಕಲ್ಗುಡಿ:

ಬೆಳಗಾವಿಯಯಲ್ಲಿ ಜನಿಸಿದ ಬಸವರಾಜ ಕಲ್ಗುಡಿಯವರು ಪ್ರಾಥಮಿಕ, ಮಾಧ್ಯಮಿಕ, ಪ್ರೌಢ ಮತ್ತು ಕಾಲೇಜು ವ್ಯಾಸಂಗವು ಬೆಂಗಳೂರಿನಲ್ಲಿ ನಡೆಸಿದರು.  ಎಂ.ಎ. (1975) ಪದವಿ. ‘ಅನುಭಾವ ಮತ್ತು ಸಾಂಸ್ಕೃತಿಕ ಸಮಸ್ಯೆಗಳು’ ಸಂಶೋಧನಾ ಪ್ರಬಂಧಕ್ಕೆ (1983) ಪಿಎಚ್.ಡಿ. ಪದವಿ ಪಡೆದರು.  ಕರ್ನಾಟಕದಲ್ಲಿನ ಮಾಸ್ತಿಕಲ್ಲು ಕುರಿತಾಗಿ ಕ್ಷೇತ್ರಕಾರ್ಯ ಮಾಡಿ ಮಂಡಿಸಿದ ಮತ್ತೊಂದು ಸಂಶೋಧನೆ `ಮಹಾಸತಿ ಆಚರಣೆ’. ಅವರ ಅಧ್ಯಯನ ಶಾಸನವನ್ನು ಕುರಿತಾಗಿದ್ತುದರೂ ಶಾಸನದ ಪಠ್ಯವನ್ನು ಕನ್ನಡ ಸಂಸ್ಕೃತಿಯ ಶೋಧನೆಗೆ ಪ್ರಮುಖ ಆಕರವಾಗಿ ಬಳಸಿದ್ದಾರೆ. ಸಂಸ್ಕೃತಿಯನ್ನು ಕುರಿತಂತೆ ವ್ಯಾಖ್ಯಾನಿಸುವಲ್ಲಿ ಕಲ್ಗುಡಿಯವರು ಸಂಸ್ಕೃತಿಯಲ್ಲಿನ ಚಲನೆಯ ಪಲ್ಲಟವನ್ನು ಸಮಗ್ರವಾಗಿ ವಿವಿಧ ನೆಲೆಗಳಿಂದ ಶೋಧಿಸುತ್ತಾರೆ. ಕಲ್ಗುಡಿಯವರು ವಚನ ಸಾಹಿತ್ಯ ಕುರಿತ ಸಂಶೋಧನಾತ್ಮಕ ಅಧ್ಯಯನದಲ್ಲಿ ವಿವಿಧ ಜ್ಞಾನಶಿಸ್ತುಗಳನ್ನು ಒಳಗೊಂಡಿದೆ. ಅವರು ವರ್ತಮಾನದ ಹಿನ್ನೆಲೆಯಿಂದ ವಚನ ಸಂಸ್ಕೃತಿಯನ್ನು ವ್ಯಾಖ್ಯಾನಿಸಿದ್ದು ಕನ್ನಡ ವಿಮರ್ಶೆಯ ಲೋಕದಲ್ಲಿಯೇ ವಿಶಿಷ್ಟ ಎಂದು ಪರಿಗಣಿಸಲಾಗುತ್ತದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago