Advertisement
ಸಾಹಿತ್ಯ

ವರ್ಧಮಾನ ಉದಯೋನ್ಮುಖ ಪ್ರಶಸ್ತಿ ಪುರಸ್ಕಾರಕ್ಕೆ ಡಾ.ದೀಪಾ ಫಡ್ಕೆ ಆಯ್ಕೆ

Share

ಮಂಗಳೂರು: ಮೂಡಬಿದರೆಯ ವರ್ಧಮಾನ ಪೀಠ ನೀಡುವ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ ಪುರಸ್ಕಾರಕ್ಕೆ ಡಾ. ದೀಪಾ ಫಡ್ಕೆ ಆಯ್ಕೆಯಾಗಿದ್ದಾರೆ  ಹಾಗೂ ವರ್ಧಮಾನ ಪುರಸ್ಕಾರಕ್ಕೆ ಡಾ.ಬಸವರಾಜ ಕಲ್ಗುಡಿ  ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕಳೆದ 39 ವರ್ಷಗಳಿಂದ ಮೂಡುಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠದ  ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ಜೀವಮಾನದ ಸಾಧನೆಗೆ ಹಿರಿಯ ಸಾಹಿತಿಗಳ ಕೃತಿಗೆ  ವರ್ಧಮಾನ ಪುರಸ್ಕಾರ ಹಾಗೂ ಉದಯೋನ್ಮುಖ ಬರಹಗಾರರು ಅಥವಾ ಸಾಹಿತಿಗಳಿಗೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ  ನೀಡಲಾಗುತ್ತಿದೆ.

Advertisement

 

ಡಾ.ದೀಪಾ ಫಡ್ಕೆ :

Advertisement

ದೀಪಾ ಫಡ್ಕೆ ಬೆಂಗಳೂರು, ಮೂಲತ: ದಕ್ಷಿಣ ಕನ್ನಡದ ಬೆಳ್ತಂಗಡಿಯವರು. ಇವರ ಇದುವರೆಗಿನ ಪ್ರಕಟಿತ ಕೃತಿಗಳು ಸಂಸ್ಕೃತಿ ಕುರಿತ ಬರಹಗಳ ಗುಚ್ಛವಾದ `ಋತ’, ಇವರ ಮೊದಲ ಕೃತಿ. `ಹರಪನಹಳ್ಳಿ ಭೀಮವ್ವ’ ಸೇರಿದಂತೆ ಒಟ್ಟು 7 ಕೃತಿಗಳು ಪ್ರಕಟವಾಗಿವೆ. ನಾಡಿನ ಪ್ರಮುಖ ಪತ್ರಿಕೆಗಳಾದ ಪ್ರಜಾವಾಣಿ, ವಿಜಯವಾಣಿ, ಉದಯವಾಣಿ, ವಿಜಯ ಕರ್ನಾಟಕ, ಹೊಸದಿಗಂತ, ಅಡ್ವೈಸರ್, ಕೊಳಲು, ತಿಲ್ಲಾನಗಳಿಗೆ ಅನೇಕ ಲೇಖನಗಳನ್ನು ಬರೆದಿದ್ದಾರೆ. ದೀಪಾ ಅವರ ಸಣ್ಣ ಕಥೆಗಳು ಮಯೂರ ಹಾಗೂ ಉದಯವಾಣಿಯಲ್ಲಿ ಪ್ರಕಟವಾಗಿದ್ದೂ ಅವರ `ತಾಯಾಗೋದು ಅಂದ್ರೆ’ ಕಥೆಗೆ ಬೆಂಗಳೂರಿನ ಕನ್ನಡ ಸಂಘರ್ಷ ಸಮಿತಿಯ ಅನುಪಮಾ ನಿರಂಜನ ಕಥಾಸ್ಪರ್ಧೆಯಲ್ಲಿ ಬಹುಮಾನ ಲಭಿಸಿದೆ.

Advertisement

 

ಡಾ.ಬಸವರಾಜ ಕಲ್ಗುಡಿ:

Advertisement

ಬೆಳಗಾವಿಯಯಲ್ಲಿ ಜನಿಸಿದ ಬಸವರಾಜ ಕಲ್ಗುಡಿಯವರು ಪ್ರಾಥಮಿಕ, ಮಾಧ್ಯಮಿಕ, ಪ್ರೌಢ ಮತ್ತು ಕಾಲೇಜು ವ್ಯಾಸಂಗವು ಬೆಂಗಳೂರಿನಲ್ಲಿ ನಡೆಸಿದರು.  ಎಂ.ಎ. (1975) ಪದವಿ. ‘ಅನುಭಾವ ಮತ್ತು ಸಾಂಸ್ಕೃತಿಕ ಸಮಸ್ಯೆಗಳು’ ಸಂಶೋಧನಾ ಪ್ರಬಂಧಕ್ಕೆ (1983) ಪಿಎಚ್.ಡಿ. ಪದವಿ ಪಡೆದರು.  ಕರ್ನಾಟಕದಲ್ಲಿನ ಮಾಸ್ತಿಕಲ್ಲು ಕುರಿತಾಗಿ ಕ್ಷೇತ್ರಕಾರ್ಯ ಮಾಡಿ ಮಂಡಿಸಿದ ಮತ್ತೊಂದು ಸಂಶೋಧನೆ `ಮಹಾಸತಿ ಆಚರಣೆ’. ಅವರ ಅಧ್ಯಯನ ಶಾಸನವನ್ನು ಕುರಿತಾಗಿದ್ತುದರೂ ಶಾಸನದ ಪಠ್ಯವನ್ನು ಕನ್ನಡ ಸಂಸ್ಕೃತಿಯ ಶೋಧನೆಗೆ ಪ್ರಮುಖ ಆಕರವಾಗಿ ಬಳಸಿದ್ದಾರೆ. ಸಂಸ್ಕೃತಿಯನ್ನು ಕುರಿತಂತೆ ವ್ಯಾಖ್ಯಾನಿಸುವಲ್ಲಿ ಕಲ್ಗುಡಿಯವರು ಸಂಸ್ಕೃತಿಯಲ್ಲಿನ ಚಲನೆಯ ಪಲ್ಲಟವನ್ನು ಸಮಗ್ರವಾಗಿ ವಿವಿಧ ನೆಲೆಗಳಿಂದ ಶೋಧಿಸುತ್ತಾರೆ. ಕಲ್ಗುಡಿಯವರು ವಚನ ಸಾಹಿತ್ಯ ಕುರಿತ ಸಂಶೋಧನಾತ್ಮಕ ಅಧ್ಯಯನದಲ್ಲಿ ವಿವಿಧ ಜ್ಞಾನಶಿಸ್ತುಗಳನ್ನು ಒಳಗೊಂಡಿದೆ. ಅವರು ವರ್ತಮಾನದ ಹಿನ್ನೆಲೆಯಿಂದ ವಚನ ಸಂಸ್ಕೃತಿಯನ್ನು ವ್ಯಾಖ್ಯಾನಿಸಿದ್ದು ಕನ್ನಡ ವಿಮರ್ಶೆಯ ಲೋಕದಲ್ಲಿಯೇ ವಿಶಿಷ್ಟ ಎಂದು ಪರಿಗಣಿಸಲಾಗುತ್ತದೆ.

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

4 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago