Advertisement
ಸಾಹಿತ್ಯ

ವರ್ಧಮಾನ ಉದಯೋನ್ಮುಖ ಪ್ರಶಸ್ತಿ ಪುರಸ್ಕಾರಕ್ಕೆ ಡಾ.ದೀಪಾ ಫಡ್ಕೆ ಆಯ್ಕೆ

Share

ಮಂಗಳೂರು: ಮೂಡಬಿದರೆಯ ವರ್ಧಮಾನ ಪೀಠ ನೀಡುವ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ ಪುರಸ್ಕಾರಕ್ಕೆ ಡಾ. ದೀಪಾ ಫಡ್ಕೆ ಆಯ್ಕೆಯಾಗಿದ್ದಾರೆ  ಹಾಗೂ ವರ್ಧಮಾನ ಪುರಸ್ಕಾರಕ್ಕೆ ಡಾ.ಬಸವರಾಜ ಕಲ್ಗುಡಿ  ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕಳೆದ 39 ವರ್ಷಗಳಿಂದ ಮೂಡುಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠದ  ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ಜೀವಮಾನದ ಸಾಧನೆಗೆ ಹಿರಿಯ ಸಾಹಿತಿಗಳ ಕೃತಿಗೆ  ವರ್ಧಮಾನ ಪುರಸ್ಕಾರ ಹಾಗೂ ಉದಯೋನ್ಮುಖ ಬರಹಗಾರರು ಅಥವಾ ಸಾಹಿತಿಗಳಿಗೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ  ನೀಡಲಾಗುತ್ತಿದೆ.

 

ಡಾ.ದೀಪಾ ಫಡ್ಕೆ :

ದೀಪಾ ಫಡ್ಕೆ ಬೆಂಗಳೂರು, ಮೂಲತ: ದಕ್ಷಿಣ ಕನ್ನಡದ ಬೆಳ್ತಂಗಡಿಯವರು. ಇವರ ಇದುವರೆಗಿನ ಪ್ರಕಟಿತ ಕೃತಿಗಳು ಸಂಸ್ಕೃತಿ ಕುರಿತ ಬರಹಗಳ ಗುಚ್ಛವಾದ `ಋತ’, ಇವರ ಮೊದಲ ಕೃತಿ. `ಹರಪನಹಳ್ಳಿ ಭೀಮವ್ವ’ ಸೇರಿದಂತೆ ಒಟ್ಟು 7 ಕೃತಿಗಳು ಪ್ರಕಟವಾಗಿವೆ. ನಾಡಿನ ಪ್ರಮುಖ ಪತ್ರಿಕೆಗಳಾದ ಪ್ರಜಾವಾಣಿ, ವಿಜಯವಾಣಿ, ಉದಯವಾಣಿ, ವಿಜಯ ಕರ್ನಾಟಕ, ಹೊಸದಿಗಂತ, ಅಡ್ವೈಸರ್, ಕೊಳಲು, ತಿಲ್ಲಾನಗಳಿಗೆ ಅನೇಕ ಲೇಖನಗಳನ್ನು ಬರೆದಿದ್ದಾರೆ. ದೀಪಾ ಅವರ ಸಣ್ಣ ಕಥೆಗಳು ಮಯೂರ ಹಾಗೂ ಉದಯವಾಣಿಯಲ್ಲಿ ಪ್ರಕಟವಾಗಿದ್ದೂ ಅವರ `ತಾಯಾಗೋದು ಅಂದ್ರೆ’ ಕಥೆಗೆ ಬೆಂಗಳೂರಿನ ಕನ್ನಡ ಸಂಘರ್ಷ ಸಮಿತಿಯ ಅನುಪಮಾ ನಿರಂಜನ ಕಥಾಸ್ಪರ್ಧೆಯಲ್ಲಿ ಬಹುಮಾನ ಲಭಿಸಿದೆ.

 

ಡಾ.ಬಸವರಾಜ ಕಲ್ಗುಡಿ:

ಬೆಳಗಾವಿಯಯಲ್ಲಿ ಜನಿಸಿದ ಬಸವರಾಜ ಕಲ್ಗುಡಿಯವರು ಪ್ರಾಥಮಿಕ, ಮಾಧ್ಯಮಿಕ, ಪ್ರೌಢ ಮತ್ತು ಕಾಲೇಜು ವ್ಯಾಸಂಗವು ಬೆಂಗಳೂರಿನಲ್ಲಿ ನಡೆಸಿದರು.  ಎಂ.ಎ. (1975) ಪದವಿ. ‘ಅನುಭಾವ ಮತ್ತು ಸಾಂಸ್ಕೃತಿಕ ಸಮಸ್ಯೆಗಳು’ ಸಂಶೋಧನಾ ಪ್ರಬಂಧಕ್ಕೆ (1983) ಪಿಎಚ್.ಡಿ. ಪದವಿ ಪಡೆದರು.  ಕರ್ನಾಟಕದಲ್ಲಿನ ಮಾಸ್ತಿಕಲ್ಲು ಕುರಿತಾಗಿ ಕ್ಷೇತ್ರಕಾರ್ಯ ಮಾಡಿ ಮಂಡಿಸಿದ ಮತ್ತೊಂದು ಸಂಶೋಧನೆ `ಮಹಾಸತಿ ಆಚರಣೆ’. ಅವರ ಅಧ್ಯಯನ ಶಾಸನವನ್ನು ಕುರಿತಾಗಿದ್ತುದರೂ ಶಾಸನದ ಪಠ್ಯವನ್ನು ಕನ್ನಡ ಸಂಸ್ಕೃತಿಯ ಶೋಧನೆಗೆ ಪ್ರಮುಖ ಆಕರವಾಗಿ ಬಳಸಿದ್ದಾರೆ. ಸಂಸ್ಕೃತಿಯನ್ನು ಕುರಿತಂತೆ ವ್ಯಾಖ್ಯಾನಿಸುವಲ್ಲಿ ಕಲ್ಗುಡಿಯವರು ಸಂಸ್ಕೃತಿಯಲ್ಲಿನ ಚಲನೆಯ ಪಲ್ಲಟವನ್ನು ಸಮಗ್ರವಾಗಿ ವಿವಿಧ ನೆಲೆಗಳಿಂದ ಶೋಧಿಸುತ್ತಾರೆ. ಕಲ್ಗುಡಿಯವರು ವಚನ ಸಾಹಿತ್ಯ ಕುರಿತ ಸಂಶೋಧನಾತ್ಮಕ ಅಧ್ಯಯನದಲ್ಲಿ ವಿವಿಧ ಜ್ಞಾನಶಿಸ್ತುಗಳನ್ನು ಒಳಗೊಂಡಿದೆ. ಅವರು ವರ್ತಮಾನದ ಹಿನ್ನೆಲೆಯಿಂದ ವಚನ ಸಂಸ್ಕೃತಿಯನ್ನು ವ್ಯಾಖ್ಯಾನಿಸಿದ್ದು ಕನ್ನಡ ವಿಮರ್ಶೆಯ ಲೋಕದಲ್ಲಿಯೇ ವಿಶಿಷ್ಟ ಎಂದು ಪರಿಗಣಿಸಲಾಗುತ್ತದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

8 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

8 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

24 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago