ವರ್ಷಕ್ಕೆ 10 ಸಾವಿರ ಜನರನ್ನು ಮದ್ಯ ವ್ಯಸನ ಮುಕ್ತರನ್ನಾಗಿಸುತ್ತಿದೆ ಮದ್ಯವರ್ಜನ ಶಿಬಿರ

September 14, 2019
6:17 PM

ಧರ್ಮಸ್ಥಳ: ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ  ಮದ್ಯ ವ್ಯಸನ ಮುಕ್ತ ಸಾಧಕರ ಸಮಾವೇಶ ನಡೆಯಿತು.

ಸಮಾವೇಶವನ್ನು ಉದ್ಘಾಟಿಸಿದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,  ರಾಜ್ಯದಲ್ಲಿ 10,700 ಬಾರ್ ಗಳಿದ್ದು ಸರಕಾರಕ್ಕೆ ವಾರ್ಷಿಕ ಹದಿನೆಂಟು ಸಾವಿರ ಕೋಟಿ ರೂ. ಆದಾಯ ಬರುತ್ತದೆ.ಆದರೆ, ಮದ್ಯ ವ್ಯಸನಿಗಳು ಮಾಡುವ ಅನಾಹುತ, ಗೊಂದಲ, ಸಾಮಾಜಿಕ ಸಮಸ್ಯೆಗಳನ್ನು ತಡೆಗಟ್ಟಲು ಇದಕ್ಕಿಂತ ಶೇ. ಹತ್ತರಷ್ಟು ಹೆಚ್ಚು ವೆಚ್ಚವಾಗುತ್ತಿದೆ. ಆದುದರಿಂದ ಹೊಸ ಬಾರ್ ಗಳಿಗೆ ಪರವಾನಿಗೆ ನೀಡುವಾಗಆತ್ಮಾವಲೋಕನ ಮಾಡಬೇಕಾದ ಅನಿವಾರ್ಯತೆ ಎಂದರು. ಮದ್ಯಪಾನ ಸಂಯಮ ಮಂಡಳಿ ಮೂಲಕ ಸರಕಾರವು ಮದ್ಯ ವ್ಯಸನಿಗಳಿಂದ ಆಗುವ ಹಾನಿ ಹಾಗೂ ಗೊಂದಲದ ಸಮಸ್ಯೆ ನಿವಾರಿಸಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ.ಆದರೆ ಧರ್ಮಸ್ಥಳದ ಆಶ್ರಯದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ಮದ್ಯ ವರ್ಜನ ಶಿಬಿರಗಳ ಮೂಲಕ ಮಾನಸಿಕ ಪರಿವರ್ತನೆ ಮೂಲಕ ಮದ್ಯ ವ್ಯಸನಿಗಳನ್ನು ಪಾನ ಮುಕ್ತರಾಗಿ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವಕಾಯಕ ಶ್ಲಾಘನೀಯವಾಗಿದೆಎಂದು ಹೇಳಿ ಸರ್ಕಾರದ ಪರವಾಗಿ ಸಚಿವರು ಹೆಗ್ಗಡೆಯವರನ್ನು ಅಭಿನಂದಿಸಿದರು.

ವ್ಯಸನಮುಕ್ತರ ಪರವಾಗಿ ಬೈಂದೂರಿನ ಶೇಖರ ಶೆಟ್ಟಿ ಮತ್ತು ನೇತ್ರಾವತಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

 

ಹೇಮಾವತಿ ವೀ. ಹೆಗ್ಗಡೆಯವರು ಮಾತನಾಡಿ, ಮದ್ಯ ವ್ಯಸನಿಗಳು ಬದುಕಿದ್ದರೂ ಸತ್ತ ಹಾಗೆ. ಕುಟುಂಬದಲ್ಲಿ, ಸಮಾಜದಲ್ಲಿ ಅವಮಾನ, ಅಪಹಾಸ್ಯ, ಕೀಳರಿಮೆಗೆ ಒಳಗಾಗುತ್ತಾರೆ.ವ್ಯಸನಮುಕ್ತರಾದವರು ದ್ವಿಜರಾಗಿ ಮರುಜನ್ಮ ಪಡೆದಿದ್ದುತಮ್ಮ ಸಂಕಲ್ಪಕ್ಕೆ ವಿಕಲ್ಪ ಬಾರದಂತೆ ಎಚ್ಚರಿಕೆಯಿಂದ ಸಾರ್ಥಕಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ಕರ್ನಾಟಕರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ರೋಹಿಣಿ, ಕೆ.ಮಾತನಾಡಿ, ಚಟ್ಟಕ್ಕೆಏರಿಸುವ ಚಟಗಳುಯಾರಿಗೂ ಬೇಡ.ವ್ಯಸನ ಮುಕ್ತರು ಪತ್ನಿ, ಮಕ್ಕಳು ಹಾಗೂ ಕುಟುಂಬದವರೊಂದಿಗೆ ಶಾಂತಿ, ನೆಮ್ಮದಿಯಜೀವನ ನಡೆಸಬೇಕುಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಮದ್ಯಪಾನವೇ ಅತಿ ಹೆಚ್ಚಿನ ಅಪಘಾತಗಳಿಗೆ ಕಾರಣವಾಗಿದೆ.ಮದ್ಯವ್ಯಸನಿಗಳು ಪಾಪಿಗಳಲ್ಲ, ಮೋಸ ಮಾಡುವವರಲ್ಲ. ವ್ಯಸನ ಮುಕ್ತರಾದವರು ಧರ್ಮಸ್ಥಳದಲ್ಲಿ ಕುಟುಂಬ ಸಮೇತರಾಗಿ ದೇವರದರ್ಶನ ಪಡೆದು ಶುದ್ಧೀಕರಣಗೊಂಡು ಪವಿತ್ರಾತ್ಮರಾಗಿದ್ದೀರಿ.ದೃಢಸಂಕಲ್ಪದಿಂದ ಮತ್ತೆ ಎಂದೂ ಮದ್ಯ ವ್ಯಸನಕ್ಕೆ ಬಲಿಯಾಗದೆ ಇತರ ವ್ಯಸನಿಗಳನ್ನೂ ಪರಿವರ್ತನೆ ಮಾಡಿ ಸಾರ್ಥಕಜೀವನ ಮಾಡುವಂತೆ ಪ್ರೇರಣೆ ನೀಡಬೇಕು. ಮದ್ಯಪಾನದಿಂದ ವ್ಯಕ್ತಿತ್ವ ನಾಶವಾಗುತ್ತದೆ.ವ್ಯಸನ ಮುಕ್ತರಾದಾಗ ಆಯುಷ್ಯ, ಆರೋಗ್ಯ ಮತ್ತು ಸಂಪತ್ತು ವೃದ್ಧಿಯಾಗುತ್ತದೆ.ಸಮಾಜದಲ್ಲಿಗೌರವ ಸಿಗುತ್ತದೆ.ಸಾಂಸಾರಿಕ ನೆಮ್ಮದಿಯೊಂದಿಗೆ ಪರಸ್ಪರ ಪ್ರೀತಿ-ವಿಶ್ವಾಸದಿಂದ ಸೌಹಾರ್ದಯುತಕೌಟುಂಬಿಕಜೀವನ ನಡೆಸಬೇಕುಎಂದುಅವರು ಸಲಹೆ ನೀಡಿದರು.

ರಾಜ್ಯದ 38 ತಾಲೂಕುಗಳಿಂದ 3,559 ಮದ್ಯವ್ಯಸನ ಮುಕ್ತರು ಸಮಾವೇಶದಲ್ಲಿ ಭಾಗವಹಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯಕಾರ್ಯನಿರ್ವಾಹಕ ನಿರ್ದೇಶಕಡಾ.ಎಲ್.ಎಚ್.ಮಂಜುನಾಥ್, ಜನಜಾಗೃತಿ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷರಾದ ದೇವದಾಸ್ ಹೆಬ್ಬಾರ್, ತಾಲೂಕು ಅಧ್ಯಕ್ಷರಾದ ಕೆ.ಪ್ರತಾಪಸಿಂಹ ನಾಯಕ್, ಶಾರದಾರೈ, ವಸಂತ ಸಾಲ್ಯಾನ್ ಉಪಸ್ಥಿತರಿದ್ದರು.

ವಿವೇಕ್ ವಿ.ಪಾೈಸ್ ಸ್ವಾಗತಿಸಿದರು.ಬೆಂಗಳೂರಿನ ವಿ.ರಾಮಸ್ವಾಮಿ ಧನ್ಯವಾದವಿತ್ತರು. ಯೋಜನಾಧಿಕಾರಿಗಳಾದ ಚೆನ್ನಪ್ಪಗೌಡ ಮತ್ತುಗಣೇಶ್ ಪಿ.ಆಚಾರ್ಯಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರು ಸುಳ್ಯ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆ
February 25, 2026
5:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25-02-2026 | ಕರಾವಳಿ ಮತ್ತು ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27 ರಿಂದ ಬಿಸಿಲು ಹೆಚ್ಚಳದ ಸೂಚನೆ
February 25, 2026
2:08 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ
February 24, 2026
2:05 PM
by: ಸಾಯಿಶೇಖರ್ ಕರಿಕಳ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror