ವಳಲಂಬೆಯಲ್ಲಿ ವಸಂತ ವೇದಶಿಬಿರ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುತ್ತಿಗಾರು : ಅನೂಚಾನ ವೇದ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಸಹಯೋಗದೊಂದಿಗೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ವಸಂತ ವೇದ ಶಿಬಿರ ಹಾಗೂ ಗಾಯತ್ರಿ ಯಜ್ಞ ಇತ್ತೀಚೆಗೆ ನಡೆಯಿತು.
ವೇದ ಶಿಬಿರವನ್ನು ಉದ್ಘಾಟಿಸಿದ ವಳಲಂಬೆ ಹಿರಿಯರಾದ ವೇ.ಮೂ. ಸುಬ್ರಾಯ ಕೆದಿಲಾಯ, ವೇದ ಶಿಬಿರದ ಅವಶ್ಯಕತೆಯ ಬಗ್ಗೆ ತಿಳಿಸಿ, ಮಕ್ಕಳಿಗೆ ಸಂಸ್ಕಾರ ಹಾಗೂ ಪುರಾಣ ಕತೆಗಳ ಬಗ್ಗೆ ತಿಳಿಸಬೇಕಾದ ಅವಶ್ಯಕತೆ ಇದೆ ಎಂದರು.
ಶಿಬಿರದ ಮುಖ್ಯ ಪ್ರಾಚಾರ್ಯ ವೇ.ಮೂ.ಮಹಾಬಲೇಶ್ವರ ಭಟ್ ಪ್ರಥಮ ಪಾಠವನ್ನು ಶಿಬಿರಾರ್ಥಿಗಳಿಗೆ ಭೋಧಿಸಿದರು.
ಗುತ್ತಿಗಾರು ಹವ್ಯಕ ವಲಯಾಧ್ಯಕ್ಷ ಸೀತಾರಾಮ ಭಟ್ ಸಭಾದ್ಯಕ್ಷತೆ ವಹಿಸಿದ್ದರು. ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಬಿ.ಕೆ.ಶ್ರೀಕೃಷ್ಣ ಗುಂಡಿಮಜಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವೇ.ಮೂ.ಕರುವಜೆ ಕೇಶವ ಜೋಯಿಸರು ಗಾಯತ್ರೀ ಯಜ್ಞ ಸಂಕಲ್ಪ ಮತ್ತು ಘೃತ ಕಲಶ ಸ್ಥಾಪಿಸಿ ಗಾಯತ್ರೀ ಜಪಾರಂಭಿಸಿದರು.
ವಲಯ ಸಂಸ್ಕಾರ ವಿಭಾಗ ಪ್ರಮುಖ ಸುಬ್ರಹ್ಮಣ್ಯ ಭಟ್ ಜೀರ್ಮುಖಿ ಸ್ವಾಗತಿಸಿದರು. ವಲಯ ಕಾರ್ಯದರ್ಶಿ ಸೂರ್ಯನಾರಾಯಣ ಪುಚ್ಚಪ್ಪಾಡಿ ವಂದಿಸಿದರು. ವಿದ್ಯಾಪ್ರತಿಷ್ಟಾನದ ಕಾರ್ಯದರ್ಶಿ ಶಿವರಾಮ ಕರುವಜೆ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

3 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

6 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

15 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago