ಗುತ್ತಿಗಾರು : ಅನೂಚಾನ ವೇದ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಸಹಯೋಗದೊಂದಿಗೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ವಸಂತ ವೇದ ಶಿಬಿರ ಹಾಗೂ ಗಾಯತ್ರಿ ಯಜ್ಞ ಇತ್ತೀಚೆಗೆ ನಡೆಯಿತು.
ವೇದ ಶಿಬಿರವನ್ನು ಉದ್ಘಾಟಿಸಿದ ವಳಲಂಬೆ ಹಿರಿಯರಾದ ವೇ.ಮೂ. ಸುಬ್ರಾಯ ಕೆದಿಲಾಯ, ವೇದ ಶಿಬಿರದ ಅವಶ್ಯಕತೆಯ ಬಗ್ಗೆ ತಿಳಿಸಿ, ಮಕ್ಕಳಿಗೆ ಸಂಸ್ಕಾರ ಹಾಗೂ ಪುರಾಣ ಕತೆಗಳ ಬಗ್ಗೆ ತಿಳಿಸಬೇಕಾದ ಅವಶ್ಯಕತೆ ಇದೆ ಎಂದರು.
ಶಿಬಿರದ ಮುಖ್ಯ ಪ್ರಾಚಾರ್ಯ ವೇ.ಮೂ.ಮಹಾಬಲೇಶ್ವರ ಭಟ್ ಪ್ರಥಮ ಪಾಠವನ್ನು ಶಿಬಿರಾರ್ಥಿಗಳಿಗೆ ಭೋಧಿಸಿದರು.
ಗುತ್ತಿಗಾರು ಹವ್ಯಕ ವಲಯಾಧ್ಯಕ್ಷ ಸೀತಾರಾಮ ಭಟ್ ಸಭಾದ್ಯಕ್ಷತೆ ವಹಿಸಿದ್ದರು. ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಬಿ.ಕೆ.ಶ್ರೀಕೃಷ್ಣ ಗುಂಡಿಮಜಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವೇ.ಮೂ.ಕರುವಜೆ ಕೇಶವ ಜೋಯಿಸರು ಗಾಯತ್ರೀ ಯಜ್ಞ ಸಂಕಲ್ಪ ಮತ್ತು ಘೃತ ಕಲಶ ಸ್ಥಾಪಿಸಿ ಗಾಯತ್ರೀ ಜಪಾರಂಭಿಸಿದರು.
ವಲಯ ಸಂಸ್ಕಾರ ವಿಭಾಗ ಪ್ರಮುಖ ಸುಬ್ರಹ್ಮಣ್ಯ ಭಟ್ ಜೀರ್ಮುಖಿ ಸ್ವಾಗತಿಸಿದರು. ವಲಯ ಕಾರ್ಯದರ್ಶಿ ಸೂರ್ಯನಾರಾಯಣ ಪುಚ್ಚಪ್ಪಾಡಿ ವಂದಿಸಿದರು. ವಿದ್ಯಾಪ್ರತಿಷ್ಟಾನದ ಕಾರ್ಯದರ್ಶಿ ಶಿವರಾಮ ಕರುವಜೆ ನಿರ್ವಹಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…