Advertisement

ವಳಲಂಬೆಯಲ್ಲಿ ವಸಂತ ವೇದಶಿಬಿರ ಉದ್ಘಾಟನೆ

Share

ಗುತ್ತಿಗಾರು : ಅನೂಚಾನ ವೇದ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಸಹಯೋಗದೊಂದಿಗೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ವಸಂತ ವೇದ ಶಿಬಿರ ಹಾಗೂ ಗಾಯತ್ರಿ ಯಜ್ಞ ಇತ್ತೀಚೆಗೆ ನಡೆಯಿತು.
ವೇದ ಶಿಬಿರವನ್ನು ಉದ್ಘಾಟಿಸಿದ ವಳಲಂಬೆ ಹಿರಿಯರಾದ ವೇ.ಮೂ. ಸುಬ್ರಾಯ ಕೆದಿಲಾಯ, ವೇದ ಶಿಬಿರದ ಅವಶ್ಯಕತೆಯ ಬಗ್ಗೆ ತಿಳಿಸಿ, ಮಕ್ಕಳಿಗೆ ಸಂಸ್ಕಾರ ಹಾಗೂ ಪುರಾಣ ಕತೆಗಳ ಬಗ್ಗೆ ತಿಳಿಸಬೇಕಾದ ಅವಶ್ಯಕತೆ ಇದೆ ಎಂದರು.
ಶಿಬಿರದ ಮುಖ್ಯ ಪ್ರಾಚಾರ್ಯ ವೇ.ಮೂ.ಮಹಾಬಲೇಶ್ವರ ಭಟ್ ಪ್ರಥಮ ಪಾಠವನ್ನು ಶಿಬಿರಾರ್ಥಿಗಳಿಗೆ ಭೋಧಿಸಿದರು.
ಗುತ್ತಿಗಾರು ಹವ್ಯಕ ವಲಯಾಧ್ಯಕ್ಷ ಸೀತಾರಾಮ ಭಟ್ ಸಭಾದ್ಯಕ್ಷತೆ ವಹಿಸಿದ್ದರು. ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಬಿ.ಕೆ.ಶ್ರೀಕೃಷ್ಣ ಗುಂಡಿಮಜಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವೇ.ಮೂ.ಕರುವಜೆ ಕೇಶವ ಜೋಯಿಸರು ಗಾಯತ್ರೀ ಯಜ್ಞ ಸಂಕಲ್ಪ ಮತ್ತು ಘೃತ ಕಲಶ ಸ್ಥಾಪಿಸಿ ಗಾಯತ್ರೀ ಜಪಾರಂಭಿಸಿದರು.
ವಲಯ ಸಂಸ್ಕಾರ ವಿಭಾಗ ಪ್ರಮುಖ ಸುಬ್ರಹ್ಮಣ್ಯ ಭಟ್ ಜೀರ್ಮುಖಿ ಸ್ವಾಗತಿಸಿದರು. ವಲಯ ಕಾರ್ಯದರ್ಶಿ ಸೂರ್ಯನಾರಾಯಣ ಪುಚ್ಚಪ್ಪಾಡಿ ವಂದಿಸಿದರು. ವಿದ್ಯಾಪ್ರತಿಷ್ಟಾನದ ಕಾರ್ಯದರ್ಶಿ ಶಿವರಾಮ ಕರುವಜೆ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

6 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

1 day ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

1 day ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago