ಗುತ್ತಿಗಾರು: ಅನೂಚಾನ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಗಾಯತ್ರಿ ಯಜ್ಞದ ಹಾಗೂ ವಸಂತ ವೇದ ಶಿಬಿರದ ಸಮಾರೋಪ ಮತ್ತು ಗುತ್ತಿಗಾರು ಹವ್ಯಕ ವಲಯೋತ್ಸವ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಠಾರದಲ್ಲಿ ನಡೆಯಿತು.
ಬೆಳಗ್ಗೆ ಗಾಯತ್ರಿ ಯಜ್ಞದ ಪೂರ್ಣಾಹುತಿ ನಡೆದು ಮಧ್ಯಾಹ್ನ ನಂತರ ವೇದ ಶಿಬಿರದ ಸಮಾರೋಪ ಹಾಗೂ ಗುತ್ತಿಗಾರು ಹವ್ಯಕ ವಲಯೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಸಿ.ಟಿ.ಸತ್ಯನಾರಾಯಣ ಚಣಿಲ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮುಳ್ಳೇರಿಯಾ ಹವ್ಯಕ ಮಂಡಲ ಅಧ್ಯಕ್ಷ ಟಿ.ಕೃಷ್ಣ ಭಟ್, ಅತಿಥಿಗಳಾಗಿದ್ದರು. ಗುತ್ತಿಗಾರು ಹವ್ಯಕ ವಲಯ ಅಧ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ತಿಲು ಸಭಾಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಬಿ.ಕೆ.ಶ್ರೀಕೃಷ್ಣ ಭಟ್ ಗುಂಡಿಮಜಲು , ವೇದ ಶಿಬಿರದ ಮುಖ್ಯಗುರುಗಳಾದ ಪಿ.ವಿ.ಮಹಾಬಲೇಶ್ವರ ಭಟ್, ಗುತ್ತಿಗಾರು ಹವ್ಯಕ ವಲಯ ಕಾರ್ಯದರ್ಶಿ ಕೆ.ಸೂರ್ಯನಾರಾಯಣ ಪುಚ್ಚಪ್ಪಾಡಿ, ಅನೂಚಾನ ವಿದ್ಯಾ ಪ್ರತಿಷ್ಠಾನ ಕಾರ್ಯದರ್ಶಿ ಶಿವರಾಮ ಕರುವಜೆ, ಪ್ರಮುಖರಾದ ಸತ್ಯನಾರಾಯಣ ಮೊಗ್ರ, ವೇ.ಮೂ.ಕರುವಜೆ ಕೇಶವ ಜೋಯಿಸರು ಮೊದಲಾದವರು ಉಪಸ್ಥಿತರಿದ್ದರು.
ಅನೂಚಾನ ವಿದ್ಯಾ ಪ್ರತಿಷ್ಠಾನ ಕಾರ್ಯದರ್ಶಿ ಶಿವರಾಮ ಕರುವಜೆ ಕಾರ್ಯಕ್ರಮ ನಿರೂಪಿಸಿದರು.
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…