ಗುತ್ತಿಗಾರು: ಅನೂಚಾನ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಗಾಯತ್ರಿ ಯಜ್ಞದ ಹಾಗೂ ವಸಂತ ವೇದ ಶಿಬಿರದ ಸಮಾರೋಪ ಮತ್ತು ಗುತ್ತಿಗಾರು ಹವ್ಯಕ ವಲಯೋತ್ಸವ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಠಾರದಲ್ಲಿ ನಡೆಯಿತು.
ಬೆಳಗ್ಗೆ ಗಾಯತ್ರಿ ಯಜ್ಞದ ಪೂರ್ಣಾಹುತಿ ನಡೆದು ಮಧ್ಯಾಹ್ನ ನಂತರ ವೇದ ಶಿಬಿರದ ಸಮಾರೋಪ ಹಾಗೂ ಗುತ್ತಿಗಾರು ಹವ್ಯಕ ವಲಯೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಸಿ.ಟಿ.ಸತ್ಯನಾರಾಯಣ ಚಣಿಲ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮುಳ್ಳೇರಿಯಾ ಹವ್ಯಕ ಮಂಡಲ ಅಧ್ಯಕ್ಷ ಟಿ.ಕೃಷ್ಣ ಭಟ್, ಅತಿಥಿಗಳಾಗಿದ್ದರು. ಗುತ್ತಿಗಾರು ಹವ್ಯಕ ವಲಯ ಅಧ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ತಿಲು ಸಭಾಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಬಿ.ಕೆ.ಶ್ರೀಕೃಷ್ಣ ಭಟ್ ಗುಂಡಿಮಜಲು , ವೇದ ಶಿಬಿರದ ಮುಖ್ಯಗುರುಗಳಾದ ಪಿ.ವಿ.ಮಹಾಬಲೇಶ್ವರ ಭಟ್, ಗುತ್ತಿಗಾರು ಹವ್ಯಕ ವಲಯ ಕಾರ್ಯದರ್ಶಿ ಕೆ.ಸೂರ್ಯನಾರಾಯಣ ಪುಚ್ಚಪ್ಪಾಡಿ, ಅನೂಚಾನ ವಿದ್ಯಾ ಪ್ರತಿಷ್ಠಾನ ಕಾರ್ಯದರ್ಶಿ ಶಿವರಾಮ ಕರುವಜೆ, ಪ್ರಮುಖರಾದ ಸತ್ಯನಾರಾಯಣ ಮೊಗ್ರ, ವೇ.ಮೂ.ಕರುವಜೆ ಕೇಶವ ಜೋಯಿಸರು ಮೊದಲಾದವರು ಉಪಸ್ಥಿತರಿದ್ದರು.
ಅನೂಚಾನ ವಿದ್ಯಾ ಪ್ರತಿಷ್ಠಾನ ಕಾರ್ಯದರ್ಶಿ ಶಿವರಾಮ ಕರುವಜೆ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…