ಗುತ್ತಿಗಾರು: ಅನೂಚಾನ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಗಾಯತ್ರಿ ಯಜ್ಞದ ಹಾಗೂ ವಸಂತ ವೇದ ಶಿಬಿರದ ಸಮಾರೋಪ ಮತ್ತು ಗುತ್ತಿಗಾರು ಹವ್ಯಕ ವಲಯೋತ್ಸವ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಠಾರದಲ್ಲಿ ನಡೆಯಿತು.
ಬೆಳಗ್ಗೆ ಗಾಯತ್ರಿ ಯಜ್ಞದ ಪೂರ್ಣಾಹುತಿ ನಡೆದು ಮಧ್ಯಾಹ್ನ ನಂತರ ವೇದ ಶಿಬಿರದ ಸಮಾರೋಪ ಹಾಗೂ ಗುತ್ತಿಗಾರು ಹವ್ಯಕ ವಲಯೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಸಿ.ಟಿ.ಸತ್ಯನಾರಾಯಣ ಚಣಿಲ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮುಳ್ಳೇರಿಯಾ ಹವ್ಯಕ ಮಂಡಲ ಅಧ್ಯಕ್ಷ ಟಿ.ಕೃಷ್ಣ ಭಟ್, ಅತಿಥಿಗಳಾಗಿದ್ದರು. ಗುತ್ತಿಗಾರು ಹವ್ಯಕ ವಲಯ ಅಧ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ತಿಲು ಸಭಾಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಬಿ.ಕೆ.ಶ್ರೀಕೃಷ್ಣ ಭಟ್ ಗುಂಡಿಮಜಲು , ವೇದ ಶಿಬಿರದ ಮುಖ್ಯಗುರುಗಳಾದ ಪಿ.ವಿ.ಮಹಾಬಲೇಶ್ವರ ಭಟ್, ಗುತ್ತಿಗಾರು ಹವ್ಯಕ ವಲಯ ಕಾರ್ಯದರ್ಶಿ ಕೆ.ಸೂರ್ಯನಾರಾಯಣ ಪುಚ್ಚಪ್ಪಾಡಿ, ಅನೂಚಾನ ವಿದ್ಯಾ ಪ್ರತಿಷ್ಠಾನ ಕಾರ್ಯದರ್ಶಿ ಶಿವರಾಮ ಕರುವಜೆ, ಪ್ರಮುಖರಾದ ಸತ್ಯನಾರಾಯಣ ಮೊಗ್ರ, ವೇ.ಮೂ.ಕರುವಜೆ ಕೇಶವ ಜೋಯಿಸರು ಮೊದಲಾದವರು ಉಪಸ್ಥಿತರಿದ್ದರು.
ಅನೂಚಾನ ವಿದ್ಯಾ ಪ್ರತಿಷ್ಠಾನ ಕಾರ್ಯದರ್ಶಿ ಶಿವರಾಮ ಕರುವಜೆ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…