ಗುತ್ತಿಗಾರು: ಅನೂಚಾನ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಗಾಯತ್ರಿ ಯಜ್ಞದ ಹಾಗೂ ವಸಂತ ವೇದ ಶಿಬಿರದ ಸಮಾರೋಪ ಮತ್ತು ಗುತ್ತಿಗಾರು ಹವ್ಯಕ ವಲಯೋತ್ಸವ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಠಾರದಲ್ಲಿ ನಡೆಯಿತು.
ಬೆಳಗ್ಗೆ ಗಾಯತ್ರಿ ಯಜ್ಞದ ಪೂರ್ಣಾಹುತಿ ನಡೆದು ಮಧ್ಯಾಹ್ನ ನಂತರ ವೇದ ಶಿಬಿರದ ಸಮಾರೋಪ ಹಾಗೂ ಗುತ್ತಿಗಾರು ಹವ್ಯಕ ವಲಯೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಸಿ.ಟಿ.ಸತ್ಯನಾರಾಯಣ ಚಣಿಲ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮುಳ್ಳೇರಿಯಾ ಹವ್ಯಕ ಮಂಡಲ ಅಧ್ಯಕ್ಷ ಟಿ.ಕೃಷ್ಣ ಭಟ್, ಅತಿಥಿಗಳಾಗಿದ್ದರು. ಗುತ್ತಿಗಾರು ಹವ್ಯಕ ವಲಯ ಅಧ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ತಿಲು ಸಭಾಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಬಿ.ಕೆ.ಶ್ರೀಕೃಷ್ಣ ಭಟ್ ಗುಂಡಿಮಜಲು , ವೇದ ಶಿಬಿರದ ಮುಖ್ಯಗುರುಗಳಾದ ಪಿ.ವಿ.ಮಹಾಬಲೇಶ್ವರ ಭಟ್, ಗುತ್ತಿಗಾರು ಹವ್ಯಕ ವಲಯ ಕಾರ್ಯದರ್ಶಿ ಕೆ.ಸೂರ್ಯನಾರಾಯಣ ಪುಚ್ಚಪ್ಪಾಡಿ, ಅನೂಚಾನ ವಿದ್ಯಾ ಪ್ರತಿಷ್ಠಾನ ಕಾರ್ಯದರ್ಶಿ ಶಿವರಾಮ ಕರುವಜೆ, ಪ್ರಮುಖರಾದ ಸತ್ಯನಾರಾಯಣ ಮೊಗ್ರ, ವೇ.ಮೂ.ಕರುವಜೆ ಕೇಶವ ಜೋಯಿಸರು ಮೊದಲಾದವರು ಉಪಸ್ಥಿತರಿದ್ದರು.
ಅನೂಚಾನ ವಿದ್ಯಾ ಪ್ರತಿಷ್ಠಾನ ಕಾರ್ಯದರ್ಶಿ ಶಿವರಾಮ ಕರುವಜೆ ಕಾರ್ಯಕ್ರಮ ನಿರೂಪಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…