ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಿರ್ಮಾಣಗೊಂಡ ನವಗ್ರಹವನ ಶನಿವಾರ ಲೋಕಾರ್ಪಣೆಗೊಂಡಿತು. ದೇವಸ್ಥಾನದ ಅರ್ಚಕ ವೇ.ಮೂ. ಮಹಾಬಲೇಶ್ವರ ಭಟ್ ಪೂಜೆ ನೆರವೇರಿಸಿದರು. ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಳಲಂಬೆ ಉಪಸ್ಥಿತರಿದ್ದರಿ. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೋಳಿಕೆ ಹಾಗೂ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.
ನವಗ್ರಹವನದಲ್ಲಿ ಎಕ್ಕೆ, ಖದಿರ, ಉತ್ತರಣೆ ಸಹಿತ ನವಗ್ರಹ ವೃಕ್ಷಗಳು ಇರುತ್ತವೆ. ಈ ಬಗ್ಗೆ ಮಾಹಿತಿ ಫಲಕವೂ ಅಳವಡಿಕೆಯಾಗಲಿದೆ. ಪ್ರತೀ ಗಿಡದ ಮಹತ್ವ ಹಾಗೂ ರಾಶಿ, ನಕ್ಷತ್ರಗಳಿಗೆ ಹೊಂದಿಕೆಯಾಗುವ ಗಿಡಗಳಿಗೆ ಪ್ರದಕ್ಷಿಣೆ ಬಂದರೆ ದೋಷಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆ ಇದೆ.
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…