ಗುತ್ತಿಗಾರು: ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 17 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮ ಸೋಮವಾರ ಸಂಜೆ ನಡೆಯಿತು.
ಸಭೆಯಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವೇ.ಮೂ. ಮಹಾಬಲೇಶ್ವರ ಭಟ್ “ದೇವತಾ ಕಾರ್ಯಗಳು ಆಡಂಬರ, ಅದ್ದೂರಿತನಕ್ಕೆ ಮೀಸಲಾಗದೇ ಲೋಕಕಲ್ಯಾಣಾರ್ಥವಾಗಿ ಇರಬೇಕು, ಗಣೇಶೋತ್ಸವಗಳಲ್ಲಿ ಭಾರತೀಯ ಪದ್ಧತಿಯ ವಾದ್ಯಘೋಷಗಳು ಹೆಚ್ಚಾಗಿ ಕಂಡುಬರಬೇಕು. ಇದು ಮುಂದಿನ ಪೀಳಿಗೆಗೆ ಉತ್ತಮ ಸಂದೇಶ ನೀಡುತ್ತದೆ ಎಂದರು.
ವೇದಿಕೆಯಲ್ಲಿ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೊಳಿಕೆ, ಗಣೇಶೋತ್ಸವ ಸಮಿತಿಯ ಕೋಶಾಧಿಕಾರಿ ದುರ್ಗೇಶ್ ಪಾರೆಪ್ಪಾಡಿ ಉಪಸ್ಥಿತರಿದ್ದರು. ಸತೀಶ್ ಮೂಕಮಲೆ ಅಧ್ಯಕ್ಷತೆ ವಹಿಸಿದ್ದರು.
ಗೌರವಾಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಮೊಟ್ಟೆಮನೆ ವಂದಿಸಿದರು. ಕಿಶೋರ್ ಕುಮಾರ್ ಪೈಕ ನಿರೂಪಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…