ಗುತ್ತಿಗಾರು: ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 17 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮ ಸೋಮವಾರ ಸಂಜೆ ನಡೆಯಿತು.
ಸಭೆಯಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವೇ.ಮೂ. ಮಹಾಬಲೇಶ್ವರ ಭಟ್ “ದೇವತಾ ಕಾರ್ಯಗಳು ಆಡಂಬರ, ಅದ್ದೂರಿತನಕ್ಕೆ ಮೀಸಲಾಗದೇ ಲೋಕಕಲ್ಯಾಣಾರ್ಥವಾಗಿ ಇರಬೇಕು, ಗಣೇಶೋತ್ಸವಗಳಲ್ಲಿ ಭಾರತೀಯ ಪದ್ಧತಿಯ ವಾದ್ಯಘೋಷಗಳು ಹೆಚ್ಚಾಗಿ ಕಂಡುಬರಬೇಕು. ಇದು ಮುಂದಿನ ಪೀಳಿಗೆಗೆ ಉತ್ತಮ ಸಂದೇಶ ನೀಡುತ್ತದೆ ಎಂದರು.
ವೇದಿಕೆಯಲ್ಲಿ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೊಳಿಕೆ, ಗಣೇಶೋತ್ಸವ ಸಮಿತಿಯ ಕೋಶಾಧಿಕಾರಿ ದುರ್ಗೇಶ್ ಪಾರೆಪ್ಪಾಡಿ ಉಪಸ್ಥಿತರಿದ್ದರು. ಸತೀಶ್ ಮೂಕಮಲೆ ಅಧ್ಯಕ್ಷತೆ ವಹಿಸಿದ್ದರು.
ಗೌರವಾಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಮೊಟ್ಟೆಮನೆ ವಂದಿಸಿದರು. ಕಿಶೋರ್ ಕುಮಾರ್ ಪೈಕ ನಿರೂಪಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…