ಗುತ್ತಿಗಾರು: ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 17 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮ ಸೋಮವಾರ ಸಂಜೆ ನಡೆಯಿತು.
ಸಭೆಯಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವೇ.ಮೂ. ಮಹಾಬಲೇಶ್ವರ ಭಟ್ “ದೇವತಾ ಕಾರ್ಯಗಳು ಆಡಂಬರ, ಅದ್ದೂರಿತನಕ್ಕೆ ಮೀಸಲಾಗದೇ ಲೋಕಕಲ್ಯಾಣಾರ್ಥವಾಗಿ ಇರಬೇಕು, ಗಣೇಶೋತ್ಸವಗಳಲ್ಲಿ ಭಾರತೀಯ ಪದ್ಧತಿಯ ವಾದ್ಯಘೋಷಗಳು ಹೆಚ್ಚಾಗಿ ಕಂಡುಬರಬೇಕು. ಇದು ಮುಂದಿನ ಪೀಳಿಗೆಗೆ ಉತ್ತಮ ಸಂದೇಶ ನೀಡುತ್ತದೆ ಎಂದರು.
ವೇದಿಕೆಯಲ್ಲಿ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೊಳಿಕೆ, ಗಣೇಶೋತ್ಸವ ಸಮಿತಿಯ ಕೋಶಾಧಿಕಾರಿ ದುರ್ಗೇಶ್ ಪಾರೆಪ್ಪಾಡಿ ಉಪಸ್ಥಿತರಿದ್ದರು. ಸತೀಶ್ ಮೂಕಮಲೆ ಅಧ್ಯಕ್ಷತೆ ವಹಿಸಿದ್ದರು.
ಗೌರವಾಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಮೊಟ್ಟೆಮನೆ ವಂದಿಸಿದರು. ಕಿಶೋರ್ ಕುಮಾರ್ ಪೈಕ ನಿರೂಪಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…