ಸುದ್ದಿಗಳು

ವಸತಿ ಯೋಜನೆ ಫಲಾನುಭವಿಗಳಿಗೆ ಸಹಾಯಧನ ಬಂದಿಲ್ಲ- ತಾ.ಪಂ.ಸಭೆಯಲ್ಲಿ ಚರ್ಚೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ವಿವಿಧ ವಸತಿ ಯೋಜನೆಯಡಿ ತಾಲೂಕಿನ 245 ಮಂದಿ ಫಲಾನುಭವಿಗಳಿಗೆ ಸಹಾಯಧನ ಹಣ ಬಿಡುಗಡೆಗೆ ಬಾಕಿ ಇರುವ ಅಂಶ ಸುಳ್ಯ ತಾ.ಪಂ.ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ಗ್ರಾಸವಾಯಿತು. ತಾ.ಪಂ.ಸಾಮಾನ್ಯ ಸಭೆಯು ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆಯಲ್ಲಿ ತಾ.ಪಂ.ಸಭಾಂಗಣದಲ್ಲಿ ನಡೆಯಿತು.

Advertisement

ಸದಸ್ಯ ಅಬ್ದುಲ್ ಗಪೂರ್ ವಿಷಯ ಪ್ರಸ್ತಾವಿಸಿ 2018-19ನೇ ಸಾಲಿನಲ್ಲಿ ವಸತಿ ಯೋಜನೆಯಡಿ ಗ್ರಾ.ಪಂ.ಗೆ ತಲಾ 20ರಂತೆ ಮನೆ ಮಂಜೂರಾಗಿತ್ತು. ಅರ್ಹ ಫಲಾನುಭವಿಗಳು ಅದನ್ನು ನಂಬಿ ಹಳೆ ಮನೆ ಕೆಡವಿದ್ದರು. ಆದರೆ ಆ ಯೋಜನೆ ಅರ್ಧದಲ್ಲೇ ಸ್ಥಗಿತಗೊಂಡಿದೆ. ಇದನ್ನು ಕೈ ಬಿಟ್ಟ ಬಗ್ಗೆ ಸರಕಾರದ ಆದೇಶ ಎಲ್ಲೂ ಸಿಗುತ್ತಿಲ್ಲ. ಜತೆಗೆ ಈಗಾಗಲೇ ಬೇರೆ ಬೇರೆ ಯೋಜನೆಯಡಿ ಮನೆ ನಿರ್ಮಿಸಿದ ಫಲಾನುಭವಿಗಳಿಗೆ ಒಂದು ವರ್ಷ ಕಳೆದರೂ ಸಹಾಯಧನ ಬಂದಿಲ್ಲ ಎಂದು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ ಹಣ ಬಿಡುಗಡೆಗೆ ಬಾಕಿ ಇರುವ ಫಲಾನುಭವಿಗಳಿಗೆ ಶೀಘ್ರ ಮೊತ್ತ ಬಿಡುಗಡೆಗೊಳಿಸುವ ಬಗ್ಗೆ ಸರಕಾರ ಮಟ್ಟದಲ್ಲಿ ಸಭೆ ನಡೆಸಿ ಜಿಲ್ಲಾಡಳಿತ ಮೂಲಕ ಮಾಹಿತಿ ನೀಡಿದೆ. ಗ್ರಾ.ಪಂ. ವ್ಯಾಪ್ತಿಗೆ ನೀಡಿದ ವಸತಿ ಮಂಜೂರಾತಿ ಪ್ರಕಾರ ನಾವು ಫಲಾನುಭವಿಗಳ ಪಟ್ಟಿಯನ್ನು ಆನ್‍ಲೈನ್ ಮೂಲಕ ಸಲ್ಲಿಸಿದ್ದೇವೆ. ಆದರೆ ಚುನಾವಣೆ ಬಳಿಕ ಅದು ಮತ್ತೆ ತೆರದಿಲ್ಲ. ಹೊಸ ಮನೆಗಿಂತ ನಿರ್ಮಾಣ ಹಂತದಲ್ಲಿರುವ ಮನೆಗಳಿಗೆ ವಸತಿ ನಿಗಮವು ಬಾಕಿ ಇರುವ ಮೊತ್ತ ಪಾವತಿಸಲು ಮೊದಲ ಆದ್ಯತೆ ನೀಡಿದೆ ಎಂದರು.

ಸಾಲಮನ್ನಾ ಫಲಾನುಭವಿಗಳ ಖಾತೆಗೆ ಪಾವತಿಯಾಗದ ಹಣ: ಸರ್ಕಾರ ಘೋಷಣೆ ಮಾಡಿದ ಸಾಲಮನ್ನಾ ಫಲಾನುಭವಿಗಳ ಖಾತೆಗೆ ನ.30 ರೊಳಗೆ ಹಣ ಪಾವತಿ ಆಗುತ್ತದೆ ಎಂದು ಈ ಹಿಂದಿನ ಸಭೆಯಲ್ಲಿ ಸಹಕಾರ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದ್ದರು. ಆದರೆ ಹಣ ಬಿಡುಗಡೆ ಆಗಿಲ್ಲ. ಮಾತ್ರವಲ್ಲದೆ ಈ ಬಾರಿ ತಾಲೂಕು ಪಂಚಾಯಿತಿ ಸಭೆಗೂ ಅಧಿಕಾರಿಗಳು ಬಂದಿಲ್ಲ ಎಂದು ತಾ.ಪಂ.ಸದಸ್ಯ ರಾಧಾಕೃಷ್ಣ ಬೊಳ್ಳೂರು ಹೇಳಿದರು. ಹಾಗಾಗಿ ಅಧಿಕಾರಿ ಈ ಸಭೆಗೆ ತಕ್ಷಣ ಬರುವಂತೆ ಆಗ್ರಹಿಸಿದರು. ಇದಕ್ಕೆ ಸದಸ್ಯರಾದ ಆಶೋಕ್ ನೆಕ್ರಾಜೆ, ಅಬ್ದುಲ್ ಗಫೂರ್ ಧ್ವನಿಗೂಡಿಸಿ, ಉಳಿತಾಯ ಖಾತೆ ಸರಿಪಡಿಸಿದ ಫಲಾನುಭವಿಗಳಿಗೂ ಹಣ ಬಂದಿಲ್ಲ ಎಂದರು. ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಮಾತನಾಡಿ ಅಧಿಕಾರಿ ಸಭೆಗೆ ಗೈರು ಆಗುವುದು ಸರಿಯಲ್ಲ. ಸಭೆಗೆ ಬರಲಿ ಎಂದು ಒತ್ತಾಯಿಸಿದರು. ಬಳಿಕ ತಾ.ಪಂ.ಅಧ್ಯಕ್ಷ ಹಾಗೂ ಇಓ ಸಹಕಾರ ಇಲಾಖೆಯ ಅಧಿಕಾರಿಯನ್ನು ಸಂರ್ಪಕಿಸಿ ಸಭೆಗೆ ಬರುವಂತೆ ಸೂಚಿಸಿದರು. ಸಭೆಗೆ ಗೈರು ಆದ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು.

ಕಲ್ಮಕಾರು ಗ್ರಾಮದ ಗೂನಡ್ಕ-ಶಕ್ತಿನಗರದಲ್ಲಿ ರಬ್ಬರ್ ತೋಟದ ನಡುವೆ ವಿದ್ಯುತ್ ಮಾರ್ಗ ಇದ್ದು, ಇದರಿಂದ ಪ್ರತಿ ವರ್ಷ ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಈ ಹಿಂದೆ ಈ ಲೈನ್ ಮಾರ್ಗ ಬದಲಾವಣೆಗೆ ಮುಂದಾಗಿ ವಿದ್ಯುತ್ ಕಂಬ ತರಲಾಗಿತ್ತು. ಅದು ಅರ್ಧದಲ್ಲೇ ಬಾಕಿ ಆಗಿದೆ ಎಂದು ಸದಸ್ಯ ಉದಯ ಕೊಪ್ಪಡ್ಕ ಗಮನ ಸೆಳೆದರು. ಲೈನ್ ಮಾರ್ಗ ಬದಲಾವಣೆಗೆ ಮೆಸ್ಕಾಂನಲ್ಲಿ ಅನುದಾನ ಇಲ್ಲ ಎಂಬ ಮೆಸ್ಕಾಂ ಇಂಜಿನಿಯರ್ ಉತ್ತರಕ್ಕೆ ತಾ.ಪಂ.ಅದ್ಯಕ್ಷ ಚನಿಯ ಕಲ್ತಡ್ಕ, ಸದಸ್ಯ ರಾಧಾಕೃಷ್ಣ ಬೊಳ್ಳೂರು ಆಕ್ಷೇಪ ವ್ಯಕ್ತಪಡಿಸಿದರು. ವಾರದೊಳಗೆ ತೆರವು ಮಾಡುವಂತೆ ಅಧ್ಯಕ್ಷರು ಸೂಚಿಸಿದರು. ಸುಳ್ಯ-ಉಬರಡ್ಕ ಹಾಗೂ ಸುಳ್ಯ-ದೊಡ್ಡತೋಟ-ಮರ್ಕಂಜ ನಡುವೆ ಹೆಚ್ಚುವರಿ ಬಸ್ ಓಡಾಟಕ್ಕೆ ಕೆಎಸ್‍ಆರ್‍ಟಿಸಿ ಗಮನಕ್ಕೆ ತಂದರೂ, ಬೇಡಿಕೆ ಈಡೇರಿಲ್ಲ ಎಂದು ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಪ್ರಸ್ತಾವಿಸಿದರು. ದೇವರಹಳ್ಳಿ ಶಾಲಾ ಜಾಗದ ವಿಚಾರದ ಸಮಸ್ಯೆ ಬಗೆಹರಿದಿದೆ. ಈ ಶಾಲೆಯಲ್ಲಿ ಮಕ್ಕಳ ಸೇರ್ಪಡೆ ಇಲ್ಲದೆ ಈ ವರ್ಷ ಮುಚ್ಚಿದೆ. ಈ ಬಾರಿ ಸ್ಥಳೀಯ ಅಂಗನವಾಡಿಯಲ್ಲಿ 7 ಮಕ್ಕಳಿದ್ದು, ಅವರನ್ನು ಮುಂದಿನ ವರ್ಷದ ಶೈಕ್ಷಣಿಕ ಅವಧಿಯಲ್ಲಿ ಸೇರಿಸುವ ಪ್ರಯತ್ನ ಮಾಡಿದರೆ ಶಾಲೆ ಉಳಿಸಿಕೊಳ್ಳಬಹುದು ಎಂದು ಸದಸ್ಯ ಆಶೋಕ್ ನೆಕ್ರಾಜೆ ಹೇಳಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆ ಪುನಾರಾರಂಭಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.
ತಾ.ಪಂ.ಉಪಾಧ್ಯಕ್ಷೆ ಶುಭದಾ ಎಸ್.ರೈ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

14 hours ago

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

16 hours ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

20 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

20 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

21 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

21 hours ago