ಬದಿಯಡ್ಕ: ಪಳ್ಳತ್ತಡ್ಕ ಎ, ಯು, ಪಿ. ಶಾಲೆಯಲ್ಲಿ ವಾಚನಾ ವಾರದ ಸಮಾರೋಪ ಸಮಾರಂಭವು ಮಂಗಳವಾರ ನಡೆಯಿತು.
ನಿವೃತ್ತ ಅಧ್ಯಾಪಕರಾದ ಕುದುಂಗಿಲ ಶ್ರೀಧರ ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಾಚನಾ ದಿನಕ್ಕೆ ಸಂಬಂಧಿಸಿ ಪಿ.ಎನ್.ಪಣಿಕ್ಕರ್ ಬಗ್ಗೆ ಮಾಹಿತಿಯನ್ನು ಮಕ್ಕಳಿಗೆ ನೀಡಿದರು. ಓದಿನ ಮಹತ್ವ,ಓದುವ ವಿಧಾನ, ಒದುವ ಸಮಯ ಇತ್ಯಾದಿ ಗಳಿಗೆ ಸಂಬಂಧಿಸಿ ಪ್ರಶ್ನೆಗಳನ್ನು ಕೇಳಿಯೂ, ಮಾಹಿತಿಗಳನ್ನು ಒದಗಿಸಿಯೂ ವಚನಾವಾರದ ಸಮಾರೋಪ ಸಮಾರಂಭವನ್ನು ಅರ್ಥವತ್ತಾಗಿಸಿದರು.
ಅದರೊಂದಿಗೆ ಮಕ್ಕಳಿಗೆ ಕೆಲವು ಆಟಗಳ ಪರಿಚಯ ಮಾಡಿಸಿದರು.ಮಕ್ಕಳು ಸಂತೋಷದಿಂದ ಅದರಲ್ಲಿ ಭಾಗಿಯಾದರು. ವಿವಿಧ ಕ್ಲಬ್ ಗಳ ಉದ್ಘಾಟನೆಯು ಇದರೊಂದಿಗೆ ಜರಗಿತು.ವಾಚನಾವಾರದ ಅಂಗವಾಗಿ ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಈ ಸಂದರ್ಭದಲ್ಲಿ ಬಹುಮಾನವನ್ನು ವಿತರಿಸಲಾಯಿತು.
ಮುಖ್ಯೋಪಾಧ್ಯಾಯರಾದ ಮಣಿ ಸ್ವಾಗತಿಸಿ ವಿದ್ಯಾ ಟೀಚರ್ ವಂದಿಸಿದರು .ಶಾಲಿನಿ ಟೀಚರ್ ಕಾರ್ಯಕ್ರಮವನ್ನು ನಿರೂಪಿಸಿದರು.
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…