ಬದಿಯಡ್ಕ: ಪಳ್ಳತ್ತಡ್ಕ ಎ, ಯು, ಪಿ. ಶಾಲೆಯಲ್ಲಿ ವಾಚನಾ ವಾರದ ಸಮಾರೋಪ ಸಮಾರಂಭವು ಮಂಗಳವಾರ ನಡೆಯಿತು.
ನಿವೃತ್ತ ಅಧ್ಯಾಪಕರಾದ ಕುದುಂಗಿಲ ಶ್ರೀಧರ ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಾಚನಾ ದಿನಕ್ಕೆ ಸಂಬಂಧಿಸಿ ಪಿ.ಎನ್.ಪಣಿಕ್ಕರ್ ಬಗ್ಗೆ ಮಾಹಿತಿಯನ್ನು ಮಕ್ಕಳಿಗೆ ನೀಡಿದರು. ಓದಿನ ಮಹತ್ವ,ಓದುವ ವಿಧಾನ, ಒದುವ ಸಮಯ ಇತ್ಯಾದಿ ಗಳಿಗೆ ಸಂಬಂಧಿಸಿ ಪ್ರಶ್ನೆಗಳನ್ನು ಕೇಳಿಯೂ, ಮಾಹಿತಿಗಳನ್ನು ಒದಗಿಸಿಯೂ ವಚನಾವಾರದ ಸಮಾರೋಪ ಸಮಾರಂಭವನ್ನು ಅರ್ಥವತ್ತಾಗಿಸಿದರು.
ಅದರೊಂದಿಗೆ ಮಕ್ಕಳಿಗೆ ಕೆಲವು ಆಟಗಳ ಪರಿಚಯ ಮಾಡಿಸಿದರು.ಮಕ್ಕಳು ಸಂತೋಷದಿಂದ ಅದರಲ್ಲಿ ಭಾಗಿಯಾದರು. ವಿವಿಧ ಕ್ಲಬ್ ಗಳ ಉದ್ಘಾಟನೆಯು ಇದರೊಂದಿಗೆ ಜರಗಿತು.ವಾಚನಾವಾರದ ಅಂಗವಾಗಿ ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಈ ಸಂದರ್ಭದಲ್ಲಿ ಬಹುಮಾನವನ್ನು ವಿತರಿಸಲಾಯಿತು.
ಮುಖ್ಯೋಪಾಧ್ಯಾಯರಾದ ಮಣಿ ಸ್ವಾಗತಿಸಿ ವಿದ್ಯಾ ಟೀಚರ್ ವಂದಿಸಿದರು .ಶಾಲಿನಿ ಟೀಚರ್ ಕಾರ್ಯಕ್ರಮವನ್ನು ನಿರೂಪಿಸಿದರು.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…