ವಾಯುಭಾರ ಕುಸಿತದ ಇಫೆಕ್ಟ್ : ಮಡಿಕೇರಿಯಲ್ಲಿ ಉತ್ತಮ ಮಳೆ : ಅ.23 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

October 20, 2019
7:56 PM

ಮಡಿಕೇರಿ : ಅರಬ್ಬೀ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯು ಭಾರ ಕುಸಿತವಾದ ಕಾರಣ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸುಮಾರು 5 ದಿನಗಳ ಕಾಲ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಹೀಗಾಗಿ  ಅ.20 ರಿಂದ 23 ರವರೆಗೆ ಆರೆಂಜ್ ಅಲರ್ಟ್ ಹಾಗೂ ಅ.23 ರಿಂದ 24 ರವರೆಗೆ ಎಲ್ಲೋ ಅಲರ್ಟ್ ಘೋಷಿಸಿ ಜಿಲ್ಲಾಡಳಿತ ಎಚ್ಚರಿಕೆಯ ಮುನ್ಸೂಚನೆ ನೀಡಿದೆ.

ಮೊದಲ ಮೂರು ದಿನಗಳು 115.50 ಯಿಂದ 204.4 ಮಿ.ಮೀ ಮಳೆಯಾಗಲಿದೆ ಮತ್ತು ಕೊನೆಯ ಒಂದು ದಿನ 64.5 ರಿಂದ 115.50 ಮಿ.ಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಬೆಟ್ಟ, ಗುಡ್ಡ, ತಗ್ಗು ಪ್ರದೇಶ ಮತ್ತು ಈಗಾಗಲೇ ಮಳೆಹಾನಿಗೊಂಡಿರುವ ವ್ಯಾಪ್ತಿಯ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.  ಕಳೆದ ಎರಡು ದಿನಗಳಿಂದ ಮಡಿಕೇರಿ, ಭಾಗಮಂಡಲ ಮತ್ತು ವಿರಾಜಪೇಟೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ನಿರಂತರ ಎರಡರಿಂದ ಮೂರು ಗಂಟೆ ಧಾರಾಕಾರ ಮಳೆಯಾಗಿ ಬಿಡುವು ನೀಡುತ್ತಿದೆಯಾದರೂ ಮೋಡ ಕವಿದ ಮತ್ತು ಮಂಜು ಮುಸುಕಿದ ವಾತಾವರಣ ಜನರನ್ನು ಕಾಡುತ್ತಿದೆ. ಸೋಮವಾರಪೇಟೆಯಲ್ಲೂ ಮಳೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror