ಮಡಿಕೇರಿ : ಅರಬ್ಬೀ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯು ಭಾರ ಕುಸಿತವಾದ ಕಾರಣ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸುಮಾರು 5 ದಿನಗಳ ಕಾಲ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಅ.20 ರಿಂದ 23 ರವರೆಗೆ ಆರೆಂಜ್ ಅಲರ್ಟ್ ಹಾಗೂ ಅ.23 ರಿಂದ 24 ರವರೆಗೆ ಎಲ್ಲೋ ಅಲರ್ಟ್ ಘೋಷಿಸಿ ಜಿಲ್ಲಾಡಳಿತ ಎಚ್ಚರಿಕೆಯ ಮುನ್ಸೂಚನೆ ನೀಡಿದೆ.
ಮೊದಲ ಮೂರು ದಿನಗಳು 115.50 ಯಿಂದ 204.4 ಮಿ.ಮೀ ಮಳೆಯಾಗಲಿದೆ ಮತ್ತು ಕೊನೆಯ ಒಂದು ದಿನ 64.5 ರಿಂದ 115.50 ಮಿ.ಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಬೆಟ್ಟ, ಗುಡ್ಡ, ತಗ್ಗು ಪ್ರದೇಶ ಮತ್ತು ಈಗಾಗಲೇ ಮಳೆಹಾನಿಗೊಂಡಿರುವ ವ್ಯಾಪ್ತಿಯ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಮಡಿಕೇರಿ, ಭಾಗಮಂಡಲ ಮತ್ತು ವಿರಾಜಪೇಟೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ನಿರಂತರ ಎರಡರಿಂದ ಮೂರು ಗಂಟೆ ಧಾರಾಕಾರ ಮಳೆಯಾಗಿ ಬಿಡುವು ನೀಡುತ್ತಿದೆಯಾದರೂ ಮೋಡ ಕವಿದ ಮತ್ತು ಮಂಜು ಮುಸುಕಿದ ವಾತಾವರಣ ಜನರನ್ನು ಕಾಡುತ್ತಿದೆ. ಸೋಮವಾರಪೇಟೆಯಲ್ಲೂ ಮಳೆಯಾಗಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…