ಮಡಿಕೇರಿ : ಅರಬ್ಬೀ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯು ಭಾರ ಕುಸಿತವಾದ ಕಾರಣ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸುಮಾರು 5 ದಿನಗಳ ಕಾಲ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಅ.20 ರಿಂದ 23 ರವರೆಗೆ ಆರೆಂಜ್ ಅಲರ್ಟ್ ಹಾಗೂ ಅ.23 ರಿಂದ 24 ರವರೆಗೆ ಎಲ್ಲೋ ಅಲರ್ಟ್ ಘೋಷಿಸಿ ಜಿಲ್ಲಾಡಳಿತ ಎಚ್ಚರಿಕೆಯ ಮುನ್ಸೂಚನೆ ನೀಡಿದೆ.
ಮೊದಲ ಮೂರು ದಿನಗಳು 115.50 ಯಿಂದ 204.4 ಮಿ.ಮೀ ಮಳೆಯಾಗಲಿದೆ ಮತ್ತು ಕೊನೆಯ ಒಂದು ದಿನ 64.5 ರಿಂದ 115.50 ಮಿ.ಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಬೆಟ್ಟ, ಗುಡ್ಡ, ತಗ್ಗು ಪ್ರದೇಶ ಮತ್ತು ಈಗಾಗಲೇ ಮಳೆಹಾನಿಗೊಂಡಿರುವ ವ್ಯಾಪ್ತಿಯ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಮಡಿಕೇರಿ, ಭಾಗಮಂಡಲ ಮತ್ತು ವಿರಾಜಪೇಟೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ನಿರಂತರ ಎರಡರಿಂದ ಮೂರು ಗಂಟೆ ಧಾರಾಕಾರ ಮಳೆಯಾಗಿ ಬಿಡುವು ನೀಡುತ್ತಿದೆಯಾದರೂ ಮೋಡ ಕವಿದ ಮತ್ತು ಮಂಜು ಮುಸುಕಿದ ವಾತಾವರಣ ಜನರನ್ನು ಕಾಡುತ್ತಿದೆ. ಸೋಮವಾರಪೇಟೆಯಲ್ಲೂ ಮಳೆಯಾಗಿದೆ.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…