ಮಡಿಕೇರಿ : ಅರಬ್ಬೀ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯು ಭಾರ ಕುಸಿತವಾದ ಕಾರಣ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸುಮಾರು 5 ದಿನಗಳ ಕಾಲ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಅ.20 ರಿಂದ 23 ರವರೆಗೆ ಆರೆಂಜ್ ಅಲರ್ಟ್ ಹಾಗೂ ಅ.23 ರಿಂದ 24 ರವರೆಗೆ ಎಲ್ಲೋ ಅಲರ್ಟ್ ಘೋಷಿಸಿ ಜಿಲ್ಲಾಡಳಿತ ಎಚ್ಚರಿಕೆಯ ಮುನ್ಸೂಚನೆ ನೀಡಿದೆ.
ಮೊದಲ ಮೂರು ದಿನಗಳು 115.50 ಯಿಂದ 204.4 ಮಿ.ಮೀ ಮಳೆಯಾಗಲಿದೆ ಮತ್ತು ಕೊನೆಯ ಒಂದು ದಿನ 64.5 ರಿಂದ 115.50 ಮಿ.ಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಬೆಟ್ಟ, ಗುಡ್ಡ, ತಗ್ಗು ಪ್ರದೇಶ ಮತ್ತು ಈಗಾಗಲೇ ಮಳೆಹಾನಿಗೊಂಡಿರುವ ವ್ಯಾಪ್ತಿಯ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಮಡಿಕೇರಿ, ಭಾಗಮಂಡಲ ಮತ್ತು ವಿರಾಜಪೇಟೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ನಿರಂತರ ಎರಡರಿಂದ ಮೂರು ಗಂಟೆ ಧಾರಾಕಾರ ಮಳೆಯಾಗಿ ಬಿಡುವು ನೀಡುತ್ತಿದೆಯಾದರೂ ಮೋಡ ಕವಿದ ಮತ್ತು ಮಂಜು ಮುಸುಕಿದ ವಾತಾವರಣ ಜನರನ್ನು ಕಾಡುತ್ತಿದೆ. ಸೋಮವಾರಪೇಟೆಯಲ್ಲೂ ಮಳೆಯಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…